ಭದ್ರಾವತಿ: ನಗರಸಭೆ ವ್ಯಾಪ್ತಿಯ ಉಜ್ಜನಿಪುರ ಶ್ರೀ ಮದ್ದೂರಮ್ಮ ಟ್ರಸ್ಟ್ ವತಿಯಿಂದ ೪೦ನೇ ವರ್ಷದ ಶ್ರೀ ಮದ್ದೂರಮ್ಮ ದೇವಿಯ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ೨ ದಿನಗಳ ವಿಜೃಂಭಣೆಯಿಂದ ಜರುಗಲಿದೆ.
ಮಂಗಳವಾರ ಸಂಜೆ ಗಂಗೆಪೂಜೆ ಮತ್ತು ರಾತ್ರಿ ೮ ಗಂಟೆಗೆ ಮಹಾಮಂಗಳಾರತಿ, ನಂತರ ಅನ್ನಸಂತರ್ಪಣೆ ನೆರವೇರಿತು. ಬುಧವಾರ ಮಧ್ಯಾಹ್ನ ೧೨.೩೦ಕ್ಕೆ ತಂಬಿಟ್ಟಿನ ಆರತಿ ತರುವ ಆಚರಣೆ ನಡೆಯಲಿದ್ದು, ೨ ಗಂಟೆಗೆ ಮಹಾಮಂಗಳಾರತಿ ಜರುಗಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment