Wednesday, March 19, 2025

ಡಾ. ಪುನೀತ್ ರಾಜ್‌ಕುಮಾರ್ ಒಬ್ಬ ಶ್ರೇಷ್ಠ ಮಾನವೀಯ ಮೌಲ್ಯಗಳನ್ನು ಹೊಂದಿದ ಧೀಮಂತ ನಾಯಕ : ಆರ್.ಎಸ್ ಮಾಧುರಿ

ಭದ್ರಾವತಿ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಡಾ. ಪುನೀತ್ ರಾಜಕುಮಾರ್‌ರವರ ೫೦ನೇ ವರ್ಷದ ಹುಟ್ಟುಹಬ್ಬ ಹಮ್ಮಿಕೊಳ್ಳಲಾಗಿತ್ತು. 
    ಭದ್ರಾವತಿ : ಪುನೀತ್‌ರಾಜ್‌ಕುಮಾರ್‌ರವರು ಬಡ ವಿದ್ಯಾರ್ಥಿಗಳು, ವಿಕಲಚೇತನರು ಹಾಗು ಅನಾಥರಿಗಾಗಿ ಶಿಕ್ಷಣ ಸಂಸ್ಥೆ ಮತ್ತು ವಸತಿ ನಿಲಯಗಳನ್ನು ತೆರೆದು ಅವರ ಏಳಿಗೆಗಾಗಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಿದ ಒಬ್ಬ ಶ್ರೇಷ್ಠ ಮಾನವೀಯ ಮೌಲ್ಯಗಳನ್ನು ಹೊಂದಿದ ಧೀಮಂತ ನಾಯಕ ಎಂದು ತಾಲೂಕಿನ ಬಾರಂದೂರು ಜನತಾ ಸಹಕಾರ ಸಂಘದ ಗ್ರಾಹಕರ ಸಂಪರ್ಕ ಅಧಿಕಾರಿ ಆರ್.ಎಸ್ ಮಾಧುರಿ ಬಣ್ಣಿಸಿದರು. 
    ಅವರು ನಗರದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಪುನೀತ್ ರಾಜಕುಮಾರ್‌ರವರ ೫೦ನೇ ವರ್ಷದ ಹುಟ್ಟುಹಬ್ಬ ಉದ್ಘಾಟಿಸಿ ಮಾತನಾಡಿದರು.   
  ಪುನೀತ್ ರಾಜಕುಮಾರ್ ಒಬ್ಬ ಶ್ರೇಷ್ಠ ಚಿತ್ರನಟ ಮಾತ್ರವಲ್ಲದೆ ಮಾನವೀಯ ಮೌಲ್ಯ ಹೊಂದಿದ್ದ ಒಬ್ಬ ಸಮಾಜ ಸೇವಕರಾಗಿದ್ದರು. ಅವರ ಆದರ್ಶತನ ನಮಗೆ ಮಾದರಿಯಾಗಿವೆ ಎಂದರು. 
ಜನತಾ ಸಹಕಾರ ಸಂಘದ ಅಧಿಕಾರಿಗಳಾದ ಶಮಂತ, ಚೈತ್ರ ಹಾಗೂ ವಿದ್ಯಾ ಉಪಸ್ಥಿತರಿದ್ದರು. ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಅಂಧರ ಕೇಂದ್ರದ ವಿಕಲಚೇತನರು ಪುನೀತ್ ರಾಜಕುಮಾರ್ ಅಭಿನಯದ ಚಲನ ಚಿತ್ರಗೀತೆಗಳನ್ನು ಹಾಡುವ ಮೂಲಕ ಸಂಭ್ರಮಿಸಿದರು. 

No comments:

Post a Comment