Saturday, March 29, 2025

ಎಂಪಿಎಂ ನಿವೃತ್ತ ಕಾರ್ಮಿಕರ ಪಿಂಚಣಿ ಹೆಚ್ಚಿಸಿ : ಕೇಂದ್ರ ಕಾರ್ಮಿಕ ಸಚಿವರಿಗೆ ಮನವಿ

ರಾಜ್ಯ ಸರ್ಕಾರಿ ಸ್ವಾಮ್ಯದ ಭದ್ರಾವತಿ ನಗರದ ಮೈಸೂರು ಕಾಗದ ಕಾರ್ಖಾನೆಯ ನಿವೃತ್ತ ಕಾರ್ಮಿಕರ ಇಪಿಎಸ್-೯೫ ಪಿಂಚಣಿಯನ್ನು ಕನಿಷ್ಠ ೭೫೦೦ ರು.ಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿ ಎಂಪಿಎಂ ನೊಂದ ನಿವೃತ್ತ ಕಾರ್ಮಿಕರ ಹೋರಾಟ ವೇದಿಕೆಯಿಂದ ಕೇಂದ್ರ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಲಾಯಿತು. 
    ಭದ್ರಾವತಿ: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ನಿವೃತ್ತ ಕಾರ್ಮಿಕರ ಇಪಿಎಸ್-೯೫ ಪಿಂಚಣಿಯನ್ನು ಕನಿಷ್ಠ ೭೫೦೦ ರು.ಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿ ಎಂಪಿಎಂ ನೊಂದ ನಿವೃತ್ತ ಕಾರ್ಮಿಕರ ಹೋರಾಟ ವೇದಿಕೆಯಿಂದ ಕೇಂದ್ರ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಲಾಯಿತು. 
    ಪ್ರಸ್ತುತ ನಿವೃತ್ತ ಕಾರ್ಮಿಕರಿಗೆ ಬರುತ್ತಿರುವ ಪಿಂಚಣಿ ಮೊತ್ತ ಅತ್ಯಂತ ಕಡಿಮೆ ಇದ್ದು, ಜೀವನ ನಿರ್ವಹಣೆ ಕಷ್ಟಕರವಾಗಿದೆ. ಈ ಹಿನ್ನಲೆಯಲ್ಲಿ ಪಿಂಚಣಿ ೭೫೦೦ ರು. ಗಳಿಗೆ ಹೆಚ್ಚಿಸುವ ಮೂಲಕ ಸಹಕರಿಸುವಂತೆ ಕೋರಲಾಗಿದೆ. 
    ಕೇಂದ್ರ ಕಾರ್ಮಿಕ ಸಚಿವರಿಗೆ ಶಿವಮೊಗ್ಗದ ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರ ಮೂಲಕ ಮನವಿ ಸಲ್ಲಿಸಲಾಯಿತು. ವೇದಿಕೆ ಪ್ರಮುಖರಾದ  ಟಿ.ಜಿ ಬಸವರಾಜಯ್ಯ, ಗೋವಿಂದಪ್ಪ, ಡಿ.ಮರಿಯಪ್ಪ, ಎಚ್. ಚನ್ನೇಶಪ್ಪ, ಲೋಕಾನಂದ ರಾವ್, ವೆಂಕಟೇಶಮೂರ್ತಿ, ತಾರಕೇಶ್ವರಪ್ಪ, ಕೆ.ರಾಮಚಂದ್ರ ಸೇರಿದಂತೆ ಸುಮಾರು ೬೫ ನಿವೃತ್ತ ಕಾರ್ಮಿಕರು ಉಪಸ್ಥಿತರಿದ್ದರು.

No comments:

Post a Comment