Friday, March 28, 2025

ಯುಗಾದಿ ಕವಿತಾ ವಾಚನ ಸ್ಪರ್ಧೆಯಲ್ಲಿ ಸಾಹಿತಿ ಜೆ.ಎನ್ ಬಸವರಾಜಪ್ಪ ಕವನ ವಾಚನ

ಶಿವಮೊಗ್ಗ ಸಹ್ಯಾದ್ರಿ ಲಲಿತ ಕಲಾ ಅಕಾಡೆಮಿ ವತಿಯಿಂದ ಕೀರ್ತಿನಗರದ ವನಿತಾ ವಿದ್ಯಾಲಯದ ಸಹಯೋಗದೊಂದಿಗೆ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಯುಗಾದಿ ಕವಿತಾ ವಾಚನ ಸ್ಪರ್ಧೆಯಲ್ಲಿ ಭದ್ರಾವತಿ ನಗರದ ಹೊಸಮನೆ ನಿವಾಸಿ, ಹಿರಿಯ ಸಾಹಿತಿ ಜೆ.ಎನ್ ಬಸವರಾಜಪ್ಪ ಭಾಗವಹಿಸಿದ್ದರು. 
    ಭದ್ರಾವತಿ : ಶಿವಮೊಗ್ಗ ಸಹ್ಯಾದ್ರಿ ಲಲಿತ ಕಲಾ ಅಕಾಡೆಮಿ ವತಿಯಿಂದ ಕೀರ್ತಿನಗರದ ವನಿತಾ ವಿದ್ಯಾಲಯದ ಸಹಯೋಗದೊಂದಿಗೆ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಯುಗಾದಿ ಕವಿತಾ ವಾಚನ ಸ್ಪರ್ಧೆಯಲ್ಲಿ ನಗರದ ಹೊಸಮನೆ ನಿವಾಸಿ, ಹಿರಿಯ ಸಾಹಿತಿ ಜೆ.ಎನ್ ಬಸವರಾಜಪ್ಪ ಭಾಗವಹಿಸಿದ್ದರು. 
    ವನಿತಾ ವಿದ್ಯಾಲಯದಲ್ಲಿ ಜರುಗಿದ ಸ್ಪರ್ಧೆಯಲ್ಲಿ ಸುಮಾರು ೨೦ಕ್ಕೂ ಹೆಚ್ಚು ಕವಿಗಳು ಪಾಲ್ಗೊಂಡಿದ್ದರು. ಜೆ.ಎನ್ ಬಸವರಾಜಪ್ಪರವರು ತಾವು ರಚಿಸಿರುವ ಮತ್ತೆ ಮತ್ತೆ ಯುಗಾದಿ ಕವನ ವಾಚಿಸಿದರು. ಈಗಾಗಲೇ ಹಲವಾರು ವೇದಿಕೆಗಳಲ್ಲಿ ಬಸವರಾಜಪ್ಪರವರು ತಮ್ಮ ಕವನಗಳನ್ನು ವಾಚಿಸಿದ್ದಾರೆ. ಅಲ್ಲದೆ ಭದ್ರಾವತಿ ಆಕಾಶವಾಣಿ ಕೇಂದ್ರದ ಹಲವಾರು ಕಾರ್ಯಕ್ರಮಗಳಲ್ಲೂ ಭಾಗವಹಿಸಿದ್ದಾರೆ. 
    ವಿಜೇತರಿಗೆ ಪ್ರಾಂಶುಪಾಲ ಪ್ರೊ. ಸತ್ಯನಾರಾಯಣ ಬಹುಮಾನಗಳನ್ನು ವಿತರಿಸಿದರು. ಸಹ್ಯಾದ್ರಿ ಲಲಿತ ಕಲಾ ಅಕಾಡೆಮಿ ಅಧ್ಯಕ್ಷೆ ತಾರಾ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ವನಿತಾ ವಿದ್ಯಾಲಯದ ರಮ್ಯ ಉಪಸ್ಥಿತರಿದ್ದರು. 

No comments:

Post a Comment