Wednesday, April 9, 2025

`ಶಿಮುಲ್ ಶಿವಮೊಗ್ಗ'ಕ್ಕೆ ಒಂದು ದಿನದ ಕೈಗಾರಿಕಾ ಭೇಟಿ

ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಮಂಗಳವಾರ `ಶಿಮುಲ್ ಶಿವಮೊಗ್ಗ'ಕ್ಕೆ ಒಂದು ದಿನದ ಕೈಗಾರಿಕಾ ಭೇಟಿ ಹಮ್ಮಿಕೊಂಡಿತ್ತು. 
    ಭದ್ರಾವತಿ: ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಮಂಗಳವಾರ ಮಾಚೇನಹಳ್ಳಿಯಲ್ಲಿರುವ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟಕ್ಕೆ `ಶಿಮುಲ್ ಶಿವಮೊಗ್ಗ'ಕ್ಕೆ ಒಂದು ದಿನದ ಕೈಗಾರಿಕಾ ಭೇಟಿ ಹಮ್ಮಿಕೊಂಡಿತ್ತು. 
    ವಾಣಿಜ್ಯ ಮತ್ತು ನಿರ್ವಹಣಾ ವಿದ್ಯಾರ್ಥಿಗಳ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸುಮಾರು ೭೪ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಮುಲ್ ರಚನೆ, ಕಾರ್ಯ ನಿರ್ವಹಣೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಮಾಹಿತಿ ಪಡೆದುಕೊಂಡರು. . 
    ಕಾಲೇಜಿನ ಪ್ರಭಾರ ಪ್ರಾಂಶುಪಾಲ ಪ್ರೊ. ಆರ್. ಮಂಜಪ್ಪ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥೆ ಡಾ. ಟಿ.ಜಿ ಉಮಾ, ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ   
    ಪ್ರೊ. ಆರ್. ವೆಂಕಟೇಶ್, ಪ್ರೊ. ವಿ.ಬಿ ಚಿರಂಜೀವಿ, ಡಾ. ಅಕ್ಷತಾ, ಶಂಕರ್ ಯಾದವ್ ,ಶಾಂತಿ, ಸುಷ್ಮಾ, ವಾಣಿ, ನಂದಿತಾ ಮತ್ತು ನಾಗಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

No comments:

Post a Comment