ಸಿ.ಇ.ಟಿ ಪರೀಕ್ಷೆಗೆ ಹಾಜರಾಗಿದ್ದ ಬ್ರಾಹ್ಮಣ ವಿದ್ಯಾರ್ಥಿಗಳ ಗಾಯತ್ರಿ ದೀಕ್ಷೆ ಪಡೆದ ಜನಿವಾರ ತೆಗೆಸಿ ಅವಮಾನಗೊಳಿಸಿರುವುದು ಖಂಡನೀಯವಾಗಿದ್ದು, ತಕ್ಷಣ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭದ್ರಾವತಿ ತಾಲೂಕು ಬ್ರಾಹ್ಮಣ ಸಭಾ ಮುಖ್ಯಮಂತ್ರಿಗಳಿಗೆ ಶನಿವಾರ ತಾಲೂಕು ಆಡಳಿತದ ಮೂಲಕ ಮನವಿ ಸಲ್ಲಿಸಿದೆ
ಭದ್ರಾವತಿ : ಸಿ.ಇ.ಟಿ ಪರೀಕ್ಷೆಗೆ ಹಾಜರಾಗಿದ್ದ ಬ್ರಾಹ್ಮಣ ವಿದ್ಯಾರ್ಥಿಗಳ ಗಾಯತ್ರಿ ದೀಕ್ಷೆ ಪಡೆದ ಜನಿವಾರ ತೆಗೆಸಿ ಅವಮಾನಗೊಳಿಸಿರುವುದು ಖಂಡನೀಯವಾಗಿದ್ದು, ತಕ್ಷಣ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಾಲೂಕು ಬ್ರಾಹ್ಮಣ ಸಭಾ ಮುಖ್ಯಮಂತ್ರಿಗಳಿಗೆ ಶನಿವಾರ ತಾಲೂಕು ಆಡಳಿತದ ಮೂಲಕ ಮನವಿ ಸಲ್ಲಿಸಿದೆ.
ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಜಿ. ರಮೇಶ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಏ.೧೬ರಂದು ಶಿವಮೊಗ, ಬೀದರ್ ಹಾಗು ಬೆಂಗಳೂರಿನಲ್ಲಿ ಸಿ.ಇ.ಟಿ ಪರೀಕ್ಷೆಗೆ ಹಾಜರಾಗಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಗಾಯತ್ರಿ ದೀಕ್ಷೆ ಪಡೆದ ಜನಿವಾರ ತೆಗೆಸಿ ಅವಮಾನಗೊಳಿಸಲಾಗಿದೆ. ಅಲ್ಲದೆ ಕೆಲವು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗದಂತೆ ಮಾಡಿದ್ದು, ಈ ಕೃತ್ಯವನ್ನು ಬ್ರಾಹ್ಮಣ ಸಭಾ ಖಂಡಿಸುತ್ತದೆ.
ವರ್ಷ ಪೂರ್ತಿ ಕಷ್ಟಪಟ್ಟು ಒಳ್ಳೆಯ ಭವಿಷ್ಯಕ್ಕಾಗಿ ಸಿದ್ಧತೆ ನಡೆಸಿಕೊಂಡು ಬಂದಿದ್ದ ವಿದ್ಯಾರ್ಥಿಗಳನ್ನು ಈ ರೀತಿ ಅವಮಾನಗೊಳಿಸಿರುವುದು ಹಿಂದೂ ವಿರೋಧಿಯಾಗಿದೆ. ಈ ಕೃತ್ಯಕ್ಕೆ ಕಾರಣಕರ್ತರಾಗಿರುವ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸಭಾ ಪದಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿ ಕೆ. ಮಂಜುನಾಥ್, ಖಜಾಂಚಿ ಎಸ್. ಶೇಷಾದ್ರಿ, ಕೆ.ಎಸ್ ಸುಬ್ರಮಣ್ಯ, ಎಂ.ಎಸ್ ಜನಾರ್ಧನ ಅಯ್ಯಂಗಾರ್, ಬಿ.ಆರ್ ಇಂದ್ರಸೇನಾರಾವ್, ಎ.ಎನ್ ಕೃಷ್ಣಸ್ವಾಮಿ, ಟಿ.ಎನ್ ರಮೇಶ್, ಗೀತಾ ಮಂಜುನಾಥ್, ವೆಂಟೇಶ್ ಮೂರ್ತಿ, ಪಿ.ಕೆ ಮಂಜುನಾಥ್, ಶ್ರೀಧರ್ ಸರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment