Sunday, April 20, 2025

ವಿಜೃಂಭಣೆಯಿಂದ ಜರುಗಿದ ಶ್ರೀ ಮುನೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ಪೂಜಾ ಮಹೋತ್ಸವ

ಭದ್ರಾವತಿ ನಗರದ ಹೊಸಬುಳ್ಳಾಪುರ, ಬೈಪಾಸ್ ರಸ್ತೆ ಸಮೀಪದಲ್ಲಿರುವ ಶ್ರೀ ಮುನೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ಪೂಜಾ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ಜರುಗಿತು. 
    ಭದ್ರಾವತಿ : ನಗರದ ಹೊಸಬುಳ್ಳಾಪುರ, ಬೈಪಾಸ್ ರಸ್ತೆ ಸಮೀಪದಲ್ಲಿರುವ ಶ್ರೀ ಮುನೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ಪೂಜಾ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ಜರುಗಿತು. 
    ಬೆಳಿಗ್ಗೆ ಗಂಗಾ ಪೂಜೆ, ವಿಘ್ನೇಶ್ವರ ಪೂಜೆ, ಮಹಾಸಂಕಲ್ಪ, ಅನುಜ್ಞ ವಾಚನ, ಪುಣ್ಯಾಃ ವಾಚನ, ಕಳಸ ಪೂಜೆ, ಶ್ರೀ ಮುನೇಶ್ವರ ಸ್ವಾಮಿಗೆ ಮೂಲ ಮಂತ್ರ ಹೋಮ ಮತ್ತು ಮಹಾ ಪೂರ್ಣಾಹುತಿ, ಮಹಾ ಅಭಿಷೇಕ, ಕುಂಭಾಭಿಷೇಕ, ಅಲಂಕಾರದೊಂದಿಗೆ ಮಧ್ಯಾಹ್ನ ೧೨ಕ್ಕೆ ಮಹಾಮಂಗಳಾರತಿ ಹಾಗು ತೀರ್ಥಪ್ರಸಾದ ವಿನಿಯೋಗ ನಡೆಯಿತು. 
    ಮಧ್ಯಾಹ್ನ ೧ ಗಂಟೆಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.  ದೇವಸ್ಥಾನ ಟ್ರಸ್ಟ್ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು, ಹಳೇ ಮತ್ತ ಹೊಸ ಬುಳ್ಳಾಪುರ, ಹುಡ್ಕೋಕಾಲೋನಿ, ಜನ್ನಾಪುರ, ಸಿದ್ದಾಪುರ, ಆಂಜನೇಯ ಅಗ್ರಹಾರ, ವಿದ್ಯಾಮಂದಿರ, ನ್ಯೂಟೌನ್ ಸೇರಿದಂತೆ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು.

No comments:

Post a Comment