ಭದ್ರಾವತಿ: ತಾಲೂಕು ವೀರಶೈವ ಲಿಂಗಾಯಿತ ಮಹಿಳಾ ಸಮಾಜದ ವತಿಯಿಂದ ಅಕ್ಕಮಹಾದೇವಿ ಜಯಂತಿ ಅಂಗವಾಗಿ ಮಹಿಳೆಯರಿಗೆ ತಾಲೂಕು ಮಟ್ಟದ ವಚನ ಗಾಯನ ಸ್ಪರ್ಧೆ ಏ.೧೫ರ ಮಂಗಳವಾರ ಬೆಳಿಗ್ಗೆ ೧೦.೩೦ಕ್ಕೆ ಏರ್ಪಡಿಸಲಾಗಿದೆ.
ಹಳೇನಗರದ ತಾಲೂಕು ಕಚೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಸ್ಪರ್ಧೆ ಜರುಗಲಿದೆ. ಭಾಗವಹಿಸಲಿಚ್ಚಿಸುವವರು ಹೆಸರು ನೋಂದಾಯಿಸಲು ಏ.೧೩ ಕಡೆ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಮೊ: ೯೪೮೦೨೦೫೭೧೨ ಅಥವಾ ೯೪೪೯೫ ೮೨೮೦೦ ಸಂಪರ್ಕಿಸಬಹುದಾಗಿದೆ ಎಂದು ಸಮಾಜದ ಅಧ್ಯಕ್ಷೆ ನಾಗರತ್ನ ವಾಗೀಶ್ ಕೋಠಿ ತಿಳಿಸಿದ್ದಾರೆ.
No comments:
Post a Comment