ಭದ್ರಾವತಿಯಲ್ಲಿ ಭಾರತೀಯ ವೈದ್ಯಕೀಯ ಸಂಘ ತಾಲೂಕು ಶಾಖೆ ಮಹಿಳಾ ವಿಭಾಗ ಹಾಗೂ ಸ್ತ್ರೀ ರೋಗ ತಜ್ಞರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಆರೋಗ್ಯ ದಿನಾಚರಣೆಯಲ್ಲಿ ವೈದ್ಯಕೀಯ ಸಂಘ ತಾಲೂಕು ಶಾಖೆ ಮಹಿಳಾ ವಿಭಾಗದ ಅಧ್ಯಕ್ಷೆ ಹಾಗು ಸ್ತ್ರೀ ರೋಗ ತಜ್ಞರ ಸಂಘದ ಸಾರ್ವಜನಿಕ ಅರಿವು ಸಮಿತಿಯ ರಾಜ್ಯಾಧ್ಯಕ್ಷೆ ಡಾ. ವೀಣಾ ಭಟ್ ಪಾಲ್ಗೊಂಡು ಮಾತನಾಡಿದರು.
ಭದ್ರಾವತಿ: ಪ್ರತಿಯೊಬ್ಬರು ಉತ್ತಮ ಆರೋಗ್ಯಕ್ಕೆ ಉತ್ತಮ ಜೀವನ ಶೈಲಿ ಅಳವಡಿಸಿಕೊಳ್ಳಬೇಕೆಂದು ಭಾರತೀಯ ವೈದ್ಯಕೀಯ ಸಂಘ ತಾಲೂಕು ಶಾಖೆ ಮಹಿಳಾ ವಿಭಾಗದ ಅಧ್ಯಕ್ಷೆ ಹಾಗು ಸ್ತ್ರೀ ರೋಗ ತಜ್ಞರ ಸಂಘದ ಸಾರ್ವಜನಿಕ ಅರಿವು ಸಮಿತಿಯ ರಾಜ್ಯಾಧ್ಯಕ್ಷೆ ಡಾ. ವೀಣಾ ಭಟ್ ಹೇಳಿದರು.
ಅವರು ಭಾರತೀಯ ವೈದ್ಯಕೀಯ ಸಂಘ ತಾಲೂಕು ಶಾಖೆ ಮಹಿಳಾ ವಿಭಾಗ ಹಾಗೂ ಸ್ತ್ರೀ ರೋಗ ತಜ್ಞರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಆರೋಗ್ಯ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಉತ್ತಮ ಆರೋಗ್ಯ ಪಡೆಯುವುದು ಪ್ರತಿಯೊಬ್ಬರ ಹಕ್ಕು. ಆರೋಗ್ಯವನ್ನು ದಾನವಾಗಿ ಕೊಡಲು ಅಥವಾ ಎರವಲಾಗಿ ಪಡೆಯಲು ಸಾದ್ಯವಿಲ್ಲ. ಅದನ್ನು ಪ್ರತಿಯೊಬ್ಬರೂ ಸ್ವಯಂ ಪ್ರಯತ್ನದಿಂದಲೇ ಸಂಪಾದಿಸಬೇಕು. ಈ ಹಿನ್ನಲೆಯಲ್ಲಿ ಪ್ರತಿಯೊಬ್ಬರೂ ಉತ್ತಮ ಜೀವನಶೈಲಿ ಅಳವಡಿಸಿಕೊಳ್ಳಬೇಕೆಂದರು.
ಪ್ರತಿವರ್ಷ ಏ.೭ರಂದು ವಿಶ್ವ ಆರೋಗ್ಯ ದಿನವನ್ನು ಒಂದೊಂದು ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. `ಆಶಾದಾಯಕ ಭವಿಷ್ಯಕ್ಕಾಗಿ ಆರೋಗ್ಯಕರ ಆರಂಭ' ಎಂಬುದು ಈ ಬಾರಿಯ ಘೋಷವಾಕ್ಯವಾಗಿದೆ ಎಂದರು.
ತಾಯಿ ಮತ್ತು ನವಜಾತ ಶಿಶುವಿನ ಆರೋಗ್ಯಯುತ ಬೆಳವಣಿಗೆ ಜೊತೆಗೆ ಹೆರಿಗೆಯ ನಂತರವೂ ಮಹಿಳೆಯರ ಸರ್ವತೋಮುಖ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು. ಈ ಮೂಲಕ ಸದೃಡ ಕುಟುಂಬ, ಸದೃಢ ಸಮಾಜ ಮತ್ತು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಬುನಾದಿ ಹಾಕುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದ ಅವರು ತಾಯಿ ಮಕ್ಕಳ ಆರೋಗ್ಯಕ್ಕೆ ವಹಿಸಬೇಕಾದ ಕಾಳಜಿಗಳ ಬಗ್ಗೆ ವಿವರವಾಗಿ ತಿಳಿಸಿದರು.
ಡಾ. ಕುಮಾರಸ್ವಾಮಿ, ಡಾ. ಆಶಾ, ವಿಂದ್ಯಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment