ಭದ್ರಾವತಿ: ಮೆಸ್ಕಾಂ ಗ್ರಾಮೀಣ ಉಪವಿಭಾಗದ ಘಟಕ ೨/೩/೪ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.೧೭ರಂದು ಬೆಳಿಗ್ಗೆ ೯.೩೦ ರಿಂದ ಸಂಜೆ ೫ ಗಂಟೆವರೆಗೆ ೧೧ ಕೆವಿ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ.
ಮಾಳೇನಹಳ್ಳಿ, ನೆಲ್ಲಿಸರ, ಬಾಬಳ್ಳಿ, ಗೌಡರಹಳ್ಳಿ, ಲಕ್ಷ್ಮೀಪುರ, ಮಜ್ಜಿಗೇನಹಳ್ಳಿ, ಬೊಮ್ಮೇನಹಳ್ಳಿ, ನಿರ್ಮಲಾಪುರ ಮತ್ತು ಕೆಂಪೇಗೌಡನಗರ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
No comments:
Post a Comment