Saturday, April 5, 2025

ಉಚಿತ ಕುಡಿಯುವ ನೀರಿನ ಸೇವೆಗೆ ಮುಂದಾದ ಬಿಟಿವೈ

ಭದ್ರಾವತಿ ನಗರದಲ್ಲಿ ಭದ್ರಾವತಿ ತಮಿಳು ಯೂತ್ಸ್ ಅಸೋಸಿಯೇಷನ್(ಬಿಟಿವೈ) ವತಿಯಿಂದ ಬೇಸಿಗೆಯಲ್ಲಿ ಕುಡಿಯುವ ನೀರಿನ ದಾಹ ದಣಿಸುವ ನಿಟ್ಟಿನಲ್ಲಿ ಇದೀಗ ಚಾಲನೆ ನೀಡಲಾಗಿದ್ದು, ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗದ ಪೆಟ್ರೋಲ್ ಬಂಕ್ ಬಳಿ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. 
    ಭದ್ರಾವತಿ : ನಗರದಲ್ಲಿ ಭದ್ರಾವತಿ ತಮಿಳು ಯೂತ್ಸ್ ಅಸೋಸಿಯೇಷನ್(ಬಿಟಿವೈ) ವತಿಯಿಂದ ಬೇಸಿಗೆಯಲ್ಲಿ ಕುಡಿಯುವ ನೀರಿನ ದಾಹ ದಣಿಸುವ ನಿಟ್ಟಿನಲ್ಲಿ ಇದೀಗ ಚಾಲನೆ ನೀಡಲಾಗಿದ್ದು, ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗದ ಪೆಟ್ರೋಲ್ ಬಂಕ್ ಬಳಿ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. 
    ಕೆಲವು ವರ್ಷಗಳಿಂದ ವಿಭಿನ್ನ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ತಮಿಳು ಯೂತ್ಸ್ ಅಸೋಸಿಯೇಷನ್ ಬೇಸಿಗೆಯಲ್ಲಿ ಕುಡಿಯುವ ನೀರಿನ ದಾಹ ನೀಗಿಸುವ ನಿಟ್ಟಿನಲ್ಲಿ ಉಚಿತ ಸೇವೆಗೆ ಮುಂದಾಗಿದೆ. ಜನದಟ್ಟಣೆ ಹೆಚ್ಚಾಗಿರುವ ಸ್ಥಳದಲ್ಲಿ ಸೇವೆಗೆ ಮುಂದಾಗಿರುವುದು ಶ್ಲಾಘನೀಯ ಕಾರ್ಯವಾಗಿದೆ. ಈಗಾಗಲೇ ಅಸೋಸಿಯೇಷನ್ ವತಿಯಿಂದ ಕಡುಬಡವರು, ನಿರ್ಗತಿಕರು, ಅನಾಥರಿಗೆ ಬೆಳಗಿನ ಉಚಿತ ಉಪಹಾರ ವ್ಯವಸ್ಥೆ ಕೈಗೊಳ್ಳಲಾಗುತ್ತಿದ್ದು, ಯಶಸ್ವಿಯಾಗಿ ಮುನ್ನಡೆಯುತ್ತಿದೆ. 

No comments:

Post a Comment