ಭದ್ರಾವತಿ: ಇಲ್ಲಿಗೆ ಸಮೀಪದ ಎಂ.ಸಿ ಹಳ್ಳಿ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಏ.೧೧ರ ಶುಕ್ರವಾರ `ಪಂಗುಣಿ-ಉತ್ತಿರ' ತೀರ್ಥ ಕಾವಡಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಲಿದೆ.
ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ ೪ ಗಂಟೆಗೆ ಮೂಲಸ್ಥಾನದಲ್ಲಿ ಅಭಿಷೇಕ ಪ್ರಾರಂಭ, ೫ ಗಂಟೆಗೆ ಮಹಾಮಂಗಳಾರತಿ, ೮ ಗಂಟೆಗೆ ಬೆಳಗಿನ ಸಂಧಿಪೂಜೆ ಹಾಗು ಪುಣ್ಯತೀರ್ಥ ಅಭಿಷೇಕ, ಬೆಳಿಗ್ಗೆ ೬.೩೦ ರಿಂದ ಮಧ್ಯಾಹ್ನ ೧೨ರವರೆಗೆ ಭಕ್ತರು ಹರಕೆ ಹೊತ್ತು ತರುವ ಪುಣ್ಯತೀರ್ಥ ಮತ್ತು ಕಾವಡಿ ಸಮರ್ಪಣೆ ನಂತರ ಮಧ್ಯಾಹ್ನ ೧೨.೩೦ಕ್ಕೆ ಮಹಾಮಂಗಳಾರತಿ, ಸಂಜೆ ೫.೩೦ಕ್ಕೆ ದೀಪಾರಾಧನೆ ಮತ್ತು ರಾತ್ರಿ ೧೦ಕ್ಕೆ ಅರ್ಧಜಾಮ ಪೂಜೆ ಜರುಗಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ದೇವಾಲಯ ಸಮಿತಿ ಕೋರಿದೆ.
No comments:
Post a Comment