Monday, April 28, 2025

ಪಹಲ್ಗಾಮ್ ಕೃತ್ಯ ಖಂಡಿಸಿ ಭಾವಸಾರ ಕ್ಷತ್ರಿಯ ಸಮಾಜದಿಂದ ಪಂಜಿನ ಮೆರವಣಿಗೆ

ಭಾವಸಾರ ಕ್ಷತ್ರಿಯ ಸಮಾಜ ಹಾಗೂ ಅಂಗ ಸಂಸ್ಥೆಗಳ ಸಹಯೋಗದೊಂದಿಗೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯ ಖಂಡಿಸಿ ಹಾಗು ಹತ್ಯೆಗೊಳಗಾದ ಅಮಾಯಕ ಪ್ರವಾಸಿಗರಿಗೆ ಸಂತಾಪ ಸೂಚಿಸಿ ಭದ್ರಾವತಿ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.  
    ಭದ್ರಾವತಿ; ಭಾವಸಾರ ಕ್ಷತ್ರಿಯ ಸಮಾಜ ಹಾಗೂ ಅಂಗ ಸಂಸ್ಥೆಗಳ ಸಹಯೋಗದೊಂದಿಗೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯ ಖಂಡಿಸಿ ಹಾಗು ಹತ್ಯೆಗೊಳಗಾದ ಅಮಾಯಕ ಪ್ರವಾಸಿಗರಿಗೆ ಸಂತಾಪ ಸೂಚಿಸಿ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.  
    ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಬಳಿ ಆರಂಭಗೊಂಡ ಮೆರವಣಿಗೆ ಹಾಲಪ್ಪ ವೃತ್ತ, ಮಾಧವಚಾರ್ ವೃತ್ತದ ಮೂಲಕ ರಂಗಪ್ಪ ವೃತ್ತ ತಲುಪಿತು. ಮೆರವಣಿಗೆಯಲ್ಲಿ ಉಗ್ರರ ಕೃತ್ಯವನ್ನು ಖಂಡಿಸಲಾಯಿತು.  
    ಸಮಾಜದ ಹಿರಿಯ ಮುಖಂಡ ಡಿ.ಟಿ ಶ್ರೀಧರ್, ಸಮಾಜದ ಅಧ್ಯಕ್ಷ ರಾಘವೇಂದ್ರರಾವ್,  ಎಚ್.ಎನ್ ಯೋಗೇಶ್ ಕುಮಾರ್,  ಡಿ.ಆರ್ ಕಿರಣ್, ಜಿ.ಎಸ್ ಯೋಗೇಶ್, ವಿಠಲನಾಥ್, ವಿಶ್ವನಾಥ್ ಮಾಸ್ಟರ್, ಭಾವಸಾರ ಯುವಕ ಸಂಘದ ಸದಸ್ಯರು, ಮಹಿಳಾ ಮಂಡಳಿ ಪ್ರಮುಖರಾದ ಕಲ್ಪನಾ, ಭಾವಸಾರ ವಿಜನ್ ಅಧ್ಯಕ್ಷೆ ಶಿಲ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  

No comments:

Post a Comment