ಭದ್ರಾವತಿ : ಹಳೇನಗರದ ತಾಲೂಕು ಕಛೇರಿ ಮುಂಭಾಗದ ಎದುರು ರಸ್ತೆಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ಪಾಂಚಜನ್ಯ ನಟನಾ ಶಾಲೆ ಮತ್ತು ಫಿಲಂ ಇನ್ಸ್ಟಿಟ್ಯೂಟ್ ಏ.೧೧ರಂದು ಬೆಳಿಗ್ಗೆ ೯.೩೦ಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದಾರೆ.
ಜಾನಪದ ಮತ್ತು ಚಲನಚಿತ್ರ ಕಲಾವಿದ ಗುರುರಾಜ್ ಹೊಸಕೋಟೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಜೋಗತಿ ಮಂಜಮ್ಮ, ನ್ಯೂಟೌನ್ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಜಿ.ಎಫ್ ಕುಟ್ರಿ, ಚಲನಚಿತ್ರ ಸಂಗೀತ ನಿರ್ದೇಶಕ ಲಯ ಕೋಕಿಲ, ಚಲನಚಿತ್ರ ನಟ ಕುಮಾರ್, ಕಂಚಿನಬಾಗಿಲು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಪವನ್ ಕುಮಾರ್ ಉಡುಪ, ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯೋಪಾಧ್ಯಾಯ ದಿವಾಕರ್, ಗಂಗಾವತಿ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಈಶ್ವರ್ ಎಸ್. ಸವಡಿ, ಬಸವರಾಜ್ ಮೇಟಿ, ಡಾ. ವರ್ಷ, ಬಿ.ಎಚ್. ಗಿರಿಧರ ಮೂರ್ತಿ, ಶಂಕರ್ ಸೂಗತಿ, ಡಾ. ಸಿ. ರಾಮಚಾರಿ, ಬಸವರಾಜ್ ಸೋದರ್, ಚಂದ್ರಶೇಖರ್ ನಾಯ್ಕ್ ಮತ್ತು ರಾಜೇಶ್ ಸಂಗೊಳ್ಳಿ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಚಲನಚಿತ್ರ ನಟಿ, ಇನ್ಸ್ಟಿಟ್ಯೂಟ್ ಮುಖ್ಯಸ್ಥೆ ಪೂರ್ಣಿಮ ಪಾಟೀಲ್ ಕೋರಿದ್ದಾರೆ.
No comments:
Post a Comment