Sunday, April 27, 2025

ಉಗ್ರರ ದಾಳಿಯಲ್ಲಿ ಮೃತಪಟ್ಟ ಪ್ರವಾಸಿಗರಿಗೆ ಪಂಜಿನ ಮೆರವಣಿಗೆ ನಡೆಸಿ ಶ್ರದ್ದಾಂಜಲಿ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ ಸಾವನ್ನಪ್ಪಿದ ಪ್ರವಾಸಿಗರಿಗೆ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿ ಪಂಜಿನ ಮೆರವಣಿಗೆ ನಡೆಸುವ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು. 
    ಭದ್ರಾವತಿ:  ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ ಸಾವನ್ನಪ್ಪಿದ ಪ್ರವಾಸಿಗರಿಗೆ ತಾಲೂಕಿನ ಶಂಕರಘಟ್ಟದಲ್ಲಿ ಪಂಜಿನ ಮೆರವಣಿಗೆ ನಡೆಸುವ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು. 
    ಶಂಕರಘಟ್ಟದ ಎಸ್‌ಬಿಐ ಬ್ಯಾಂಕ್ ಸಮೀಪದಿಂದ ಆರಂಭಗೊಂಡ ಮೆರವಣಿಗೆ ಗಾನವಿ ಹೋಟೆಲ್ ಸಮೀಪದವರೆಗೂ ನಡೆಯಿತು. ದಾಳಿ ಕೃತ್ಯವನ್ನು ಖಂಡಿಸುವ ಮೂಲಕ ತಕ್ಷಣ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಂಡು ಕಾಶ್ಮೀರದಲ್ಲಿ ಶಾಂತಿ ಕಾಪಾಡಬೇಕೆಂದು ಆಗ್ರಹಿಸಲಾಯಿತು. ಅಲ್ಲದೆ ದಾಳಿಯಲ್ಲಿ ಮೃತಪಟ್ಟ ಪ್ರವಾಸಿಗರಿಗೆ ಸಂತಾಪ ಸೂಚಿಸುವ ಮೂಲಕ ಶ್ರದ್ದಾಂಜಲಿ ಸಲ್ಲಿಸಿ ಉಪತಹಸೀಲ್ದಾರ್ ಮಂಜಾನಾಯ್ಕರವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. 
    ಕುವೆಂಪು ವಿಶ್ವವಿದ್ಯಾನಿಲಯ ಎನ್‌ಎಸ್‌ಯುಐ ಗೌರವಾಧ್ಯಕ್ಷ ಆರ್. ಮುರುಗೇಶ್ ರವರು, ಗ್ರಾಮ ಪಂಚಾಯಿತಿ ಸದಸ್ಯರಾದ ಪುನೀತ್, ಶಿವಶಂಕರ್(ದಿಲ್ಲಿ), ಪ್ರವೀಣ್, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಮಾದೇಶ್, ಸಿಂಗನ ಮನೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಡಿ.ಟಿ ಶಶಿಕುಮಾರ್, ಕಟ್ಟಡ ಕಾರ್ಮಿಕರ ಸಂಘದ ಉಪಾಧ್ಯಕ್ಷ ಶರವಣ, ಮೂರ್ತಿ, ಪುಟ್ಟರಾಜು, ಮೋಹನ್, ಯೋಗೇಶ್(ಬಿಲ್ಲ), ಪ್ರವೀಣ್ ಶಾಸ್ತ್ರಿ, ವಾಸು, ವೆಂಕಟೇಶ್, ಶಶಿಕುಮಾರ್, ಘಟ್ಟ, ಗಂಗಾಧರ್, ಸುಮಿತ್ರ, ಮಂಜುನಾಥ್, ಮಂಜುಳಾ, ರೇವತಿ, ಶುಭ, ಚಂದನ, ಸುಧಾ, ಶಿಲ್ಪ, ಶೋಭಾ, ವರಲಕ್ಷ್ಮಿ, ಶರಣ, ರಮೇಶ್, ವಿನಯ್, ರವಿಕುಮಾರ್, ಗಿರೀಶ್, ವೆಂಕಿ, ಅಪ್ಪು, ಕೀರ್ತಿ, ಕಾಶಿ, ಕೋಟಿ, ಚೇತು, ವೇಲು, ಸಂದೀಪ್, ಮಂಜುನಾಥ್, ಸುರೇಶ್, ಪ್ರಮೋದ್, ರವಿಶಂಕರ್, ವಿನಾಯಕ, ಸಂತೋಷ್, ಅಮಿತ್, ರವಿ, ಕಿರಣ್ ಕುಮಾರ್, ಚಿರಂತ್, ಮೌನಿಕ, ವನಿತಾ, ಪಲ್ಲವಿ ಹಾಗೂ ಕುವೆಂಪು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗೂ ಸಿಂಗನ ಮನೆ, ತಾವರಘಟ್ಟ, ಕಂಬದಾಳ ಹೊಸೂರು ಸೇರಿದಂತೆ ಸುತ್ತಮುತ್ತಲ ಗ್ರಾಮ ಪಂಚಾಯಿತಿ ಗ್ರಾಮಸ್ಥರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

No comments:

Post a Comment