ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಕಾರ್ಮಿಕರ ದಿನಾಚರಣೆ ಅಂಗವಾಗಿ ಮೇ.೧ರಂದು ಸಾರ್ವಜನಿಕರಿಗೆ ಉಚಿತ ಸಸಿಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಖಾನೆ ಮುಖ್ಯದ್ವಾರದ ಬಳಿ ಹೈಬ್ರಿಡ್ ನುಗ್ಗೆ, ಪಪ್ಪಾಯಿ, ತುಳಸಿ ಮತ್ತು ಹೊಂಗೆ ಸಸಿಗಳನ್ನು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆವರೆಗೆ ವಿತರಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಾರ್ವಜನಿಕ ಸಂಪರ್ಕ ಇಲಾಖೆ ಕೋರಿದೆ.
No comments:
Post a Comment