Monday, April 14, 2025

ಹಿಂದೂ ಸಮಾಜದಲ್ಲಿ ಶೌರ್ಯಕ್ಕೆ ಮತ್ತೊಂದು ಹೆಸರು ಭಜರಂಗದಳ : ಪ್ರಭಂಜನ್

ಭದ್ರಾವತಿ ನಗರದ ತರೀಕೆರೆ ರಸ್ತೆ, ರೈಲ್ವೆ ಮೇಲ್ಸೇತುವೆ ಬಳಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಶೌರ್ಯ ಸಂಚಲನದ ಅಂಗವಾಗಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಬಜರಂಗದಳ ಪ್ರಾಂತ ಸಂಯೋಜಕ ಪ್ರಭಂಜನ್ ಪಾಲ್ಗೊಂಡು ಮಾತನಾಡಿದರು. 
    ಭದ್ರಾವತಿ: ಹಿಂದೂ ಸಮಾಜದಲ್ಲಿ ಶೌರ್ಯಕ್ಕೆ ಮತ್ತೊಂದು ಹೆಸರು ಭಜರಂಗದಳ. ಸಮಾಜದಲ್ಲಿನ ಸಂಘರ್ಷಕ್ಕಾಗಿ ಹಿಂದೂಗಳ ರಕ್ಷಣೆಗಾಗಿ, ಹಿಂದುತ್ವದ ಹೋರಾಟಕ್ಕಾಗಿ ಜನಿಸಿದ ಸಂಘಟನೆಯೇ ಬಜರಂಗದಳ ಎಂದು ಬಜರಂಗದಳ ಪ್ರಾಂತ ಸಂಯೋಜಕ ಪ್ರಭಂಜನ್ ಹೇಳಿದರು
    ಅವರು ನಗರದ ತರೀಕೆರೆ ರಸ್ತೆ, ರೈಲ್ವೆ ಮೇಲ್ಸೇತುವೆ ಬಳಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಶೌರ್ಯ ಸಂಚಲನದ ಅಂಗವಾಗಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. 
    ಬಜರಂಗದಳ ಸಮಾಜದಲ್ಲಿ ರಾಷ್ಟ್ರ ಭಕ್ತಿ ಪ್ರೇರೇಪಿಸುತ್ತಾ, ರಾಷ್ಟ್ರಕ್ಕಾಗಿ ತನ್ನ ಸೇವೆಯನ್ನು ಸಮರ್ಪಿಸುತ್ತಿದೆ. ರಾಮನ ಕಾರ್ಯದ ಜೊತೆಗೆ ರಾಷ್ಟ್ರ ಕಾರ್ಯವನ್ನು ಮಾಡುತ್ತಿದೆ. ಗೋ ಹತ್ಯೆ, ದೇಶ ವಿಭಜನೆ, ಸ್ತ್ರೀಯರ ಮೇಲೆ ಹಲ್ಲೆ ಸೇರಿದಂತೆ ಇತ್ಯಾದಿ ಘಟನೆಗಳು ದೇಶ ವಿಭಜನೆಯಾಗಿ ಪ್ರತ್ಯೇಕ ರಾಷ್ಟ್ರ ನಿರ್ಮಾಣವಾಗಿ ಸ್ವಾತಂತ್ರ್ಯ ಬಂದರೂ ನಿರಂತರವಾಗಿ ನಡೆಯುತ್ತಿವೆ. ಇಂದಿಗೂ ಶಾಂತಿ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ. ಅಂದಿನ ಎಲ್ಲಾ ಸಮಸ್ಯೆಗಳು ಇಂದಿಗೂ ಮುಂದುವರೆಯುತ್ತಿದ್ದು, ಇದರಲ್ಲಿ ಸ್ವಲ್ಪವೂ ಬದಲಾವಣೆಯಾಗಿಲ್ಲ. ಇವೆಲ್ಲದರ ನಡುವೆ ಬಜರಂಗದಳ ಧೈರ್ಯವಾಗಿ ಹೋರಾಟ ನಡೆಸುವ ಮೂಲಕ ಸಂಘಟನೆ ಹೆಚ್ಚು ಬಲಿಷ್ಠಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು. .
    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಾಜಕೀಯ ಲಾಭಕ್ಕಾಗಿ ಮುಸ್ಲಿಂ ಸಮುದಾಯದವರ ಓಲೈಕೆಯಲ್ಲಿ ತೊಡಗಿದ್ದು, ಇದು ಮಿತಿ ಮೀರಿದೆ. ಮುಸ್ಲಿಂ ಸಮುದಾಯದವರು ಹೆಚ್ಚಿನ ಜನಸಂಖ್ಯೆ ಹೊಂದಿದ್ದು, ಅವರನ್ನು ಅಲ್ಪಸಂಖ್ಯಾತರೆಂದು ಪರಿಗಣಿಸಿ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿರುವುದು ಸಂವಿಧಾನದ ಅಶಯಕ್ಕೆ ವಿರುದ್ಧವಾಗಿದೆ. ಇದು ಮುಂದಿನ ದಿನಗಳಲ್ಲಿ ದೇಶಕ್ಕೆ ಗಂಡಾಂತರ ತರುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಎಚ್ಚರಿಸಿದರು.
    ಪ್ರಾಂತ ಕಾರ್ಯಕಾರಿಣಿ ಸದಸ್ಯ ಹಾ.ರಾಮಪ್ಪ, ಧರ್ಮ ಪ್ರಸಾರ ಪ್ರಮುಖ್ ನಾರಾಯಣ ವರ್ಣೇಕರ್, ವಿಭಾಗ ಕಾರ್ಯದರ್ಶಿ ಚಂದ್ರಶೇಖರ್ ಮತ್ತು ಜಿಲ್ಲಾ ಕಾರ್ಯದರ್ಶಿ ಆನಂದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಸುರೇಶ್ ಬಾಬು ಸ್ವಾಗತಿಸಿ, ಜಿಲ್ಲಾ ಸಂಯೋಜಕ ರಾಘವ ವಡಿವೇಲು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಭಿಷೇಕ ಕಾರ್ಯಕ್ರಮ ನಿರೂಪಿಸಿ, ಕೃಷ್ಣ ವಂದಿಸಿದರು. 
       ಇದಕ್ಕೂ ಮೊದಲು ಬಿ.ಎಚ್ ರಸ್ತೆ, ಲೋಯರ್ ಹುತ್ತಾ, ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಿಂದ ಇದೇ ಮೊದಲ ಬಾರಿಗೆ ಸಮವಸ್ತ್ರಧಾರಿ ಕಾರ್ಯಕರ್ತರ ಸಂಗೀತಯುಕ್ತ ಪಥ ಸಂಚಲನ ನಡೆಯಿತು. 

No comments:

Post a Comment