Saturday, April 12, 2025

ಅಂಬೇಡ್ಕರ್ ಜಯಂತಿ : ಏ.೧೪ರಂದು ಉಚಿತ ಸಸಿಗಳ ವಿತರಣೆ

ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಈ ಬಾರಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೪ನೇ ಜನ್ಮದಿನಾಚರಣೆ ಅಂಗವಾಗಿ ವಿಶೇಷವಾಗಿ ಸಾರ್ವಜನಿಕರಿಗೆ ಉಚಿತ ಸಸಿಗಳನ್ನು ವಿತರಿಸುತ್ತಿದೆ. 
೭೫೦ ಹೈಬ್ರೀಡ್ ನುಗ್ಗೆ, ಪಪ್ಪಾಯಿ, ತುಳಸಿ ಮತ್ತು ಹೊಂಗೆ ಸಸಿಗಳನ್ನು ಸಾರ್ವಜನಿಕರಿಗೆ ಏ.೧೪ರಂದು ಕಾರ್ಖಾನೆಯ ಮುಖ್ಯದ್ವಾರದ ಬಳಿ ಮಧ್ಯಾಹ್ನ ೨ ಗಂಟೆಯಿಂದ ಸಂಜೆ ೫ ಗಂಟೆವರೆಗೆ ವಿತರಿಸಲಾಗುತ್ತಿದೆ. 
ಪ್ರತಿಯೊಬ್ಬರಿಗೂ ೨ ಸಸಿಗಳನ್ನು ಮಾತ್ರ ವಿತರಿಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳುವಂತೆ ಕಾರ್ಖಾನೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್ ಪ್ರವೀಣ್ ಕುಮಾರ್ ಕೋರಿದ್ದಾರೆ. 

No comments:

Post a Comment