Saturday, May 24, 2025

ಅಪಘಾತ : ವ್ಯಕ್ತಿ ಸಾವು

ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ವ್ಯಕ್ತಿ 
    ಭದ್ರಾವತಿ : ನಗರದ ಜೇಡಿಕಟ್ಟೆ ಬಳಿ ಶುಕ್ರವಾರ ಮಧ್ಯ ರಾತ್ರಿ ರಸ್ತೆ ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದ್ದು, ಈ ಸಂಬಂಧ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
    ಸುಮಾರು ೫೦ ರಿಂದ ೬೦ ವರ್ಷ ವಯಸ್ಸಿನ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಅಪಘಾತ ಮಾಡಿ ಹೋಗಿರುವ ವಾಹನದ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಮೃತಪಟ್ಟಿರುವ ವ್ಯಕ್ತಿ ತರೀಕೆರೆ ತಾಲೂಕಿನ ಬೆಟ್ಟದಹಳ್ಳಿ ವಾಸಿ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗೆ ಸಂಚಾರಿ ಪೊಲೀಸ್ ಠಾಣೆ ಸಂಪರ್ಕಿಸಬಹುದಾಗಿದೆ. 

No comments:

Post a Comment