ಕೆ.ಬಿ.ಗುರುಪ್ರಸಾದ್(ಉನ್ನಿ)
ಭದ್ರಾವತಿ : ಬಹಳ ವರ್ಷಗಳಿಂದ ನಗರದ ರೈಲ್ವೆ ಕ್ಯಾಂಟೀನ್ ಮಾಲೀಕರಾಗಿರುವ, ನಗರಸಭೆ ವಾರ್ಡ್ ೩ರ ವ್ಯಾಪ್ತಿಯ ಚಾಮೇಗೌಡ ಏರಿಯಾ ನಿವಾಸಿ ಕೆ.ಬಿ.ಗುರುಪ್ರಸಾದ್(೫೮) ಗುರುವಾರ ರಾತ್ರಿ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರ ಹಾಗು ಓರ್ವ ಪುತ್ರಿ ಇದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಇವರು ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಅಂತ್ಯಕ್ರಿಯೆ ಶುಕ್ರವಾರ ಸಂಜೆ ಸಮೀಪದ ಭದ್ರಾ ನದಿ ತೀರದ ತೋಟದಲ್ಲಿ ನೆರವೇರಿತು. ಸುಮಾರು ೫ ದಶಕಗಳಿಂದ ರೈಲ್ವೆ ಕ್ಯಾಂಟೀನ್ ಇವರ ಕುಟುಂಬಸ್ಥರು ನಡೆಸಿಕೊಂಡು ಬರುತ್ತಿದ್ದು, ಗುರುಪ್ರಸಾದ್ರವರು ಉನ್ನಿ ಎಂಬ ಹೆಸರಿನಲ್ಲಿ ಚಿರಪರಿಚಿತರಾಗಿದ್ದರು.
ಸಂತಾಪ:
ಶಾಸಕ ಬಿ.ಕೆ.ಸಂಗಮೇಶ್ವರ್, ಉದ್ಯಮಿ ಬಿ.ಕೆ ಜಗನ್ನಾಥ್, ನಗರಸಭೆ ಸದಸ್ಯ ಬಿ.ಕೆ ಮೋಹನ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಎರೇಹಳ್ಳಿ ಗ್ರಾ.ಪಂ. ಸದಸ್ಯ ಸಿ.ಆರ್ ಶಿವರಾಂ, ಬಿಜೆಪಿ ಮುಖಂಡ ಕೂಡ್ಲಿಗೆರೆ ಹಾಲೇಶ್, ವೀರಶೈವ ಲಿಂಗಾಯಿತ ಮಹಾಸಭಾ ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯ, ಮುಖಂಡರಾದ ಕರುಣಾಕರ್, ಮುಕುಂದರಾವ್, ರೈಲ್ವೆ ಅಧಿಕಾರಿಗಳು ಸಿಬ್ಬಂದಿಗಳು, ಅನೇಕ ಸಂಘ ಸಂಸ್ಥೆಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.
No comments:
Post a Comment