Sunday, May 4, 2025

ಎಸ್‌ಎಸ್‌ಎಲ್‌ಸಿ : ಪತ್ರಿಕಾ ವಿತರಕನ ಪುತ್ರಿಗೆ ೬೧೧ ಅಂಕ

ಕೀರ್ತನಾ  
    ಭದ್ರಾವತಿ : ನಗರದ ಆದಿಚುಂಚನಗಿರಿ ವಿದ್ಯಾಸಂಸ್ಥೆ ಪ್ರೌಢಶಾಲೆ ವಿದ್ಯಾರ್ಥಿನಿ ಕೀರ್ತನಾ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೧೧ ಅಂಕ ಪಡೆದು ಶೇ.೯೭.೭೬ ಫಲಿತಾಂಶದೊಂದಿಗೆ ಅತ್ಯನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 
    ವಿಶೇಷ ಎಂದರೆ ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕ ಪಡೆದು ಕೀರ್ತನಾ ಗಮನ ಸೆಳೆದಿದ್ದು, ಇವರು ನಗರದ ಹುಡ್ಕೋ ಕಾಲೋನಿ ನಿವಾಸಿ, ದಿನ ಪತ್ರಿಕೆಗಳ ವಿತರಕ ಕೃಷ್ಣಮೂರ್ತಿ ಮತ್ತು ಸ್ವರ್ಣಾಂಬ ದಂಪತಿ ಪುತ್ರಿಯಾಗಿದ್ದಾರೆ. ಕೀರ್ತನಾ ಸಾಧನೆಗೆ ನಗರದ ಪತ್ರಕರ್ತರು, ಪತ್ರಿಕಾ ವಿತರಕರು, ಗಣ್ಯರು ಹಾಗು ಸ್ಥಳೀಯ ನಿವಾಸಿಗಳು ಅಭಿನಂದಿಸಿದ್ದಾರೆ.

No comments:

Post a Comment