Thursday, May 22, 2025

ಸಹ ಪ್ರಾಧ್ಯಾಪಕ ಡಾ. ಎಸ್. ವರದರಾಜರಿಗೆ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ

ಡಾ. ಎಸ್. ವರದರಾಜ 
    ಭದ್ರಾವತಿ: ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ಸಹ ಪ್ರಾಧ್ಯಾಪಕ ಡಾ. ಎಸ್ ವರದರಾಜರವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ. 
    ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ೩ ದಿನಗಳ ರಾಜ್ಯಮಟ್ಟದ ಕ್ರೀಡಾದ ಪುರುಷರ ಭಾರ ಎತ್ತುವ ಸ್ಪರ್ಧೆಯ ೮೩ ಕೆ.ಜಿ ದೇಹ ತೂಕ ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಸ್ಪರ್ಧಿಸಲು ಅರ್ಹರಾಗಿರುತ್ತಾರೆ. 
    ವರದರಾಜರವರು ಕಳೆದ ೨ ವರ್ಷಗಳಿಂದ ರಾಷ್ಟ್ರಮಟ್ಟ ಹಾಗು ೧೦ ವರ್ಷಗಳಿಂದ ರಾಜ್ಯಮಟ್ಟದಲ್ಲಿ ಗೆಲುವು ಸಾಧಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕರಾಗಿದ್ದು, ಇವರಿಗೆ ಕಾಲೇಜಿನ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ. 

No comments:

Post a Comment