ಭದ್ರಾವತಿ ವಿಐಎಸ್ಎಲ್ ಗುತ್ತಿಗೆ ಕಾರ್ಮಿಕರ ಸಂಘಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಪುನಃ ಹಾಲಿ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.
ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಗುತ್ತಿಗೆ ಕಾರ್ಮಿಕ ಸಂಘ(ವಿಐಎಸ್ಪಿ ಕಾಂಟ್ರಾಕ್ಟ್ ವರ್ಕರ್ಸ್ ಯೂನಿಯನ್)ದ ೩ ವರ್ಷಗಳ ಅವಧಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಪುನಃ ಬಹುತೇಕ ಹಾಲಿ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿ ಸುರೇಶ್, ಉಪಾಧ್ಯಕ್ಷರಾಗಿ ಮಂಜುನಾಥ್ ಮತ್ತು ಎನ್. ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಯಾಗಿ ರಾಕೇಶ್ ಹಾಗು ಸಹಕಾರ್ಯದರ್ಶಿಯಾಗಿ ಅಂತೋಣಿ ದಾಸ್, ಎಚ್.ಡಿ ತ್ಯಾಗರಾಜ್ ಮತ್ತು ಎನ್.ಬಿ ಮಂಜುನಾಥ್ ಹಾಗು ಖಜಾಂಚಿಯಾಗಿ ಆನಂದ ಆಯ್ಕೆಯಾಗಿದ್ದಾರೆ.
ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆವರೆಗೂ ನ್ಯೂಟೌನ್ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆ (ಜೆಟಿಎಸ್)ಯಲ್ಲಿ ಮತದಾನ ನಡೆಯಿತು. ನಂತರ ಮತದಾನ ಕಾರ್ಯ ನಡೆದು ಫಲಿತಾಂಶ ಪ್ರಕಟಗೊಂಡಿತು. . ಸಹಪ್ರಾಧ್ಯಾಪಕ ಡಾ. ಎಸ್. ಸುಮಂತ್ ಕುಮಾರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
No comments:
Post a Comment