Tuesday, May 27, 2025

ಮೇ.೨೮ರಂದು ವಿದ್ಯುತ್ ವ್ಯತ್ಯಯ


    ಭದ್ರಾವತಿ : ಮೆಸ್ಕಾಂ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ. ೨೮ರ ಬುಧವಾರ ಬೆಳಿಗ್ಗೆ ೧೦.೩೦ ರಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
    ಸಂತೆ ಮೈದಾನ, ಹೊಸಮನೆ, ಎನ್‌ಎಂಸಿ ರಸ್ತೆ, ಕೇಶವಪುರ, ಸುಭಾಷ್ ನಗರ, ಸಿ.ಎನ್ ರಸ್ತೆ, ಎಪಿಎಂಸಿ ಮತ್ತು ಭೋವಿಕಾಲೋನಿ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ. 

No comments:

Post a Comment