ಭದ್ರಾವತಿ ಸಿದ್ದಾರೂಢನಗರದ ಶ್ರೀ ಶೃಂಗೇರಿ ಶಂಕರ ಮಠದ ಧರ್ಮಾಧಿಕಾರಿ ಕೆ.ಆರ್ ಸುಬ್ಬರಾವ್ರವರು ೯೫ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಅವರನ್ನು ರಾಜ್ಯ ಒಬ್ಬೂರು ಕಮ್ಮೆ ಸೇವಾ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ : ಸಿದ್ದಾರೂಢನಗರದ ಶ್ರೀ ಶೃಂಗೇರಿ ಶಂಕರ ಮಠದ ಧರ್ಮಾಧಿಕಾರಿ ಕೆ.ಆರ್ ಸುಬ್ಬರಾವ್ರವರು ೯೫ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಅವರನ್ನು ರಾಜ್ಯ ಒಬ್ಬೂರು ಕಮ್ಮೆ ಸೇವಾ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಸೇವಾ ಸಮಿತಿ ಅಧ್ಯಕ್ಷ ಎ.ವಿ ಪ್ರಸನ್ನ ನೇತೃತ್ವದಲ್ಲಿ ಸುಬ್ಬರಾವ್ ಅವರ ನಿವಾಸಕ್ಕೆ ತೆರಳಿ ಅವರನ್ನು ಸನ್ಮಾನಿಸಿ ಗೌರವಿಸುವ ಮೂಲಕ ದೇವರು ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲೆಂದು ಪ್ರಾರ್ಥಿಸಲಾಯಿತು.
ರಾಜ್ಯ ಸಮಿತಿ ನಿರ್ದೇಶಕರಾದ ಕೆ.ಎಸ್ ನಾಗರಾಜ, ಜಿಲ್ಲಾ ಬ್ರಾಹ್ಮಣ ಮಹಾಸಭೆ ಪ್ರತಿನಿಧಿ ಎನ್.ಎಂ ರಘುರಾಮ್, ಮಾ.ಸ ನಂಜುಂಡಸ್ವಾಮಿ, ಛಾಯಾಪತಿ, ಪ್ರಕಾಶಭಟ್ಟರು, ತಾಲೂಕು ಬ್ರಾಹ್ಮಣ ಮಹಾಸಭೆ ಮಾಜಿ ಅಧ್ಯಕ್ಷ ಎ.ಎನ್ ಸುರೇಶ್ ಹಾಗು ಶಂಕರ ಮಠದ ಕೆ.ಎಸ್ ನಾಗರಾಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment