Wednesday, May 28, 2025

ಮೇ.೩೦ರಂದು ವಿಶ್ವ ಗುರು ಬಸವಣ್ಣನವರ ಜಯಂತ್ಯೋತ್ಸವ



    ಭದ್ರಾವತಿ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಸಿದ್ದಾರೂಢ ನಗರದ ಶ್ರೀ ಬಸವೇಶ್ವರ ಧರ್ಮಸಂಸ್ಥೆ ಹಾಗು ತಾಲೂಕಿನ ವಿವಿಧ ಸಂಘ-ಸಂಸ್ಥೆಗಳು ಮತ್ತು ಬಸವಾಭಿಮಾನಿಗಳ ಸಹಕಾರದೊಂದಿಗೆ ಮೇ.೩೦ರ ಶನಿವಾರ ಸಂಜೆ ೫.೩೦ಕ್ಕೆ ಶ್ರೀ ಬಸವೇಶ್ವರ ಸಭಾಭವನದಲ್ಲಿ ವಿಶ್ವ ಗುರು ಬಸವಣ್ಣನವರ ಜಯಂತ್ಯೋತ್ಸವ ಏರ್ಪಡಿಸಲಾಗಿದೆ. 
    ಸರ್ವಜ್ಞನ ಮಾಸೂರು ತಿಪ್ಪಾಯಿಕೊಪ್ಪದ ಶ್ರೀ ಗುರು ಮೂಕಪ್ಪ ಶಿವಯೋಗಿಗಳ ಮಠದ ಶ್ರೀ ಮ.ನಿ.ಪ್ರ ಮಹಾಂತಸ್ವಾಮಿಗಳವರು ಸಮಾರಂಭದ ದಿವ್ಯ ಸಾನಿಧ್ಯವಹಿಸಲಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ಉಪಸ್ಥಿತರಿದ್ದು, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಎಸ್ ಮಲ್ಲಿಕಾರ್ಜುನಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಕು.ವಿ.ವಿ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್) ಸಂಯೋಜನಾಧಿಕಾರಿ ಡಾ.ಶುಭಾ ಮರವಂತೆ ಉದ್ಘಾಟಿಸಲಿದ್ದು, ಹೊನ್ನಾವರ ಕವಲಕ್ಕಿ ವೈದ್ಯೆ ಹಾಗು ಲೇಖಕಿ ಡಾ.ಎಚ್.ಎಸ್ ಅನುಪಮ ಉಪನ್ಯಾಸ ನೀಡಲಿದ್ದಾರೆ.
    ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ, ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
    ಶಿವಮೊಗ್ಗ ಅಲ್ಲಮಪ್ರಭು ಬಯಲು ಮೈದಾನದಲ್ಲಿ ಮೇ ೯ ರಂದು (ಹಳೇ ಜೈಲು ಆವರಣದಲ್ಲಿ ) ನಡೆದ ಸಾವಿರ ವಚನ ಕಾರ್ಯಕ್ರಮದಲ್ಲಿ ಗಾಯನ ಮಾಡಿದ ತಾಲೂಕಿನ ೧೦೮ ಗಾಯಕರಿಂದ ಸಾಮೂಹಿಕ ವಚನ ಗಾಯನ ಸಂಜೆ ೫.೩೦ಕ್ಕೆ ಟಿ.ಜೆ ನಾಗರತ್ನರವರ ಸಾರಥ್ಯದಲ್ಲಿ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸುವಂತೆ ಕೋರಲಾಗಿದೆ. 

No comments:

Post a Comment