Thursday, May 8, 2025

ಮಧು ಲ್ಯಾಬ್‌ನಿಂದ ಪೌರ ಕಾರ್ಮಿಕರಿಗೆ ಗೌರವಾರ್ಪಣೆ

ಭದ್ರಾವತಿ ನಗರದ ರಂಗಪ್ಪ ವೃತ್ತದ ಮಧು ಲ್ಯಾಬೋರೇಟರಿ ವತಿಯಿಂದ ಪೌರ ಕಾರ್ಮಿಕರನ್ನು ಗೌರವಿಸುವ ಮೂಲಕ ವಿಶ್ವ ಕಾರ್ಮಿಕರ ದಿನಾಚರಣೆ ವಿನೂತನವಾಗಿ ಆಚರಿಸಲಾಯಿತು. 
    ಭದ್ರಾವತಿ : ನಗರದ ರಂಗಪ್ಪ ವೃತ್ತದಲ್ಲಿರುವ ಮಧು ಲ್ಯಾಬೋರೇಟರಿ ವತಿಯಿಂದ ಪೌರ ಕಾರ್ಮಿಕರನ್ನು ಗೌರವಿಸುವ ಮೂಲಕ ವಿಶ್ವ ಕಾರ್ಮಿಕರ ದಿನಾಚರಣೆ ವಿನೂತನವಾಗಿ ಆಚರಿಸಲಾಯಿತು. 
    ರಂಗಪ್ಪ ವೃತ್ತ ಮತ್ತು ಕೇಶವಪುರ ಬಡಾವಣೆ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ನಗರಸಭೆ ಪೌರ ಕಾರ್ಮಿಕರಾದ ಎಸ್. ಶರವಣ, ಲಕ್ಷ್ಮಮ್ಮ ಮತ್ತು ತಿರುಮಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಲ್ಯಾಬ್ ಮಾಲೀಕ ಎಸ್.ಆರ್ ಜಗದೀಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರು ಸಮಾಜದ ಸ್ವಾಸ್ಥ್ಯ, ಸ್ವಚ್ಚತೆ ಮತ್ತು ನೈರ್ಮಲ್ಯ ಕಾಪಾಡುವ, ಜನರ ಆರೋಗ್ಯ ರಕ್ಷಿಸುವ ನಿಜವಾದ ವೈದ್ಯರು. ಜಗತ್ತು ಸುಖ ನಿದ್ರೆಯಲ್ಲಿದ್ದಾಗ ಎದ್ದು ತಮ್ಮ ಕರ್ತವ್ಯ ನಿರ್ವಹಿಸುವ ಪೌರ ಕಾರ್ಮಿಕರ ಕಾರ್ಯ ಅಭಿನಂದನೀಯ ಎಂದರು. 
    ಪೌರ ಕಾಮಿಕರ ಕುಟುಂಬ ವರ್ಗ ಉತ್ತಮ ಗುಣಮಟ್ಟದ ಜೀವನ ನಡೆಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು. ಸಮಾಜದ ಪ್ರತಿಯೊಬ್ಬ ನಾಗರಿಕ ಪೌರ ಕಾರ್ಮಿಕರನ್ನು ಗೌರವದಿಂದ ಕಾಣುವಂತಾಗಬೇಕೆಂದರು.
    ಕಾರ್ಯಕ್ರಮದಲ್ಲಿ ಮಧು ಸಾರಥಿ, ಎಚ್. ಲೀಲಾವತಿ, ಎಂ. ದೀಪಿಕಾ, ಚಿರಾಗ್ ಸಾರಥಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಾರ್ವಜನಿಕರಿಗೆ ಸಿಹಿ ಹಂಚಿಕೆ ಮಾಡಲಾಯಿತು.

No comments:

Post a Comment