ಭೂ ಲೋಕದ ಕಲ್ಯಾಣಕ್ಕಾಗಿ ಮಹಾ ತಪ್ಪಸ್ಸಿನೊಂದಿಗೆ ಗಂಗೆಯನ್ನು ಭೂಮಿಗೆ ಕರೆತಂದ ಶ್ರೀ ಭಗೀರಥ ಮಹರ್ಷಿ ಅವರ ಜಯಂತಿ ಭದ್ರಾವತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಭಾನುವಾರ ಆಚರಿಸಲಾಯಿತು.
ಭದ್ರಾವತಿ : ಭೂ ಲೋಕದ ಕಲ್ಯಾಣಕ್ಕಾಗಿ ಮಹಾ ತಪ್ಪಸ್ಸಿನೊಂದಿಗೆ ಗಂಗೆಯನ್ನು ಭೂಮಿಗೆ ಕರೆತಂದ ಶ್ರೀ ಭಗೀರಥ ಮಹರ್ಷಿ ಅವರ ಜಯಂತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಭಾನುವಾರ ಆಚರಿಸಲಾಯಿತು.
ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸ್ಮರಿಸಲಾಯಿತು. ಉಪತಹಸೀಲ್ದಾರ್ ಮಂಜಾನಾಯ್ಕ ಅವರ ನೇತೃತ್ವದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಉಪತಹಸೀಲ್ದಾರ್ ನಾರಾಯಣ ಗೌಡ, ತಾಲೂಕು ಉಪ್ಪಾರ ಸಮಾಜದ ಪ್ರಮುಖರಾದ ಎಸ್ ರಾಜಶೇಖರ ಉಪ್ಪಾರ, ರವೀಶ್ ಕುಮಾರ್, ಅವಿನಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment