Saturday, June 21, 2025

ಅಡ್ವೋಕೆಸಿ ಕಾರ್ಯಾಗಾರ : ಕೀಟಜನ್ಯ ರೋಗಳ ಬಗ್ಗೆ ಮಾಹಿತಿ

ವಿಶ್ವ ಮಲೇರಿಯಾ ವಿರೋಧಿ ಮಾಸಾಚಾರಣೆ ಅಂಗವಾಗಿ ಶನಿವಾರ ಭದ್ರಾವತಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ತಾಲೂಕಿನ ಎಲ್ಲಾ ಖಾಸಗಿ ಆಸ್ಪತ್ರೆ/ಕ್ಲಿನಿಕ್/ಪ್ರಯೋಗಶಾಲೆ/ಆಯುಷ್/ಹೊಮಿಯೊಪತಿ/ಸಿದ್ದ/ನ್ಯಾಚುರೋಪತಿ ಸೇರಿದಂತೆ ಇತರೆ ಭಾರತೀಯ ವೈದ್ಯಕೀಯ ಪದ್ಧತಿ ಪಾಲಿಸುವವರಿಗೆ, ಅಡ್ವೋಕೆಸಿ  ಕಾರ್ಯಾಗಾರ ಆಯೋಜಿಸಲಾಗಿತ್ತು.
    ಭದ್ರಾವತಿ: ವಿಶ್ವ ಮಲೇರಿಯಾ ವಿರೋಧಿ ಮಾಸಾಚಾರಣೆ ಅಂಗವಾಗಿ ಶನಿವಾರ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ತಾಲೂಕಿನ ಎಲ್ಲಾ ಖಾಸಗಿ ಆಸ್ಪತ್ರೆ/ಕ್ಲಿನಿಕ್/ಪ್ರಯೋಗಶಾಲೆ/ಆಯುಷ್/ಹೊಮಿಯೊಪತಿ/ಸಿದ್ದ/ನ್ಯಾಚುರೋಪತಿ ಸೇರಿದಂತೆ ಇತರೆ ಭಾರತೀಯ ವೈದ್ಯಕೀಯ ಪದ್ಧತಿ ಪಾಲಿಸುವವರಿಗೆ, ಅಡ್ವೋಕೆಸಿ  ಕಾರ್ಯಾಗಾರ ಆಯೋಜಿಸಲಾಗಿತ್ತು.
    ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಗುಡದಪ್ಪ ಕಸಬಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿ, ಮಲೇರಿಯಾ, ಡೆಂಗ್ಯೂ, ಚಿಕೂನ್ ಗುನ್ಯಾ, ಆನೆಕಾಲು ರೋಗ, ಮೆದುಳು ಜ್ವರ ಸೇರಿದಂತೆ ಕೀಟಜನ್ಯ ರೋಗಗಳ ಬಗ್ಗೆ ಮಾಹಿತಿ ನೀಡಿದರು. 
     ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಮಾತನಾಡಿ, ಮಲೇರಿಯಾ ಹಾಗು ಡೆಂಗ್ಯೂ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಶಿಕ್ಷಣ ಆರೋಗ್ಯಾಧಿಕಾರಿ ಸುಶೀಲ ಬಾಯಿ, ಹಿರಿಯ ಆರೋಗ್ಯ ನಿರೀಕ್ಷಕ ಆನಂದಮೂರ್ತಿ, ಜಿಲ್ಲಾ ಆರೋಗ್ಯ ಮೇಲ್ವಿಚಾರಕರು, ತಾಲೂಕು ಆರೋಗ್ಯ ಮೇಲ್ವಿಚಾರಕರು ಹಾಗೂ ಖಾಸಗಿ ಕ್ಲಿನಿಕ್ ವೈದ್ಯರು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

No comments:

Post a Comment