ಸೋಮವಾರ, ಜೂನ್ 2, 2025

ಪುರಾಣ ಪ್ರಸಿದ್ದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಸ್ವಚ್ಛದ ಕಾರ್ಯ

ಮೇಲ್ಭಾಗದಲ್ಲಿ ಬೆಳೆದು ನಿಂತಿದ್ದ ಗಿಡಗಂಟಿಗಳ ತೆರವು 

ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರ ಪಾಲಕ ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಸಂಪೂರ್ಣ ಶಿಲಾಮಯವಾಗಿರುವ ವೆಂಕಿಪುರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಮೇಲ್ಭಾಗದಲ್ಲಿ ಬೆಳೆದು ನಿಂತಿದ್ದ ಗಿಡಗಂಟಿಗಳನ್ನು ಪುರಾತತ್ವ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಮೂಲಕ ತೆರವುಗೊಳಿಸಲಾಯಿತು. 
    ಭದ್ರಾವತಿ : ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರ ಪಾಲಕ ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಸಂಪೂರ್ಣ ಶಿಲಾಮಯವಾಗಿರುವ ವೆಂಕಿಪುರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಮೇಲ್ಭಾಗದಲ್ಲಿ ಬೆಳೆದು ನಿಂತಿದ್ದ ಗಿಡಗಂಟಿಗಳನ್ನು ಪುರಾತತ್ವ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಮೂಲಕ ತೆರವುಗೊಳಿಸಲಾಯಿತು. 
    ಹಲವಾರು ವರ್ಷಗಳಿಂದ ದೇವಸ್ಥಾನದ ಮೇಲ್ಭಾಗದಲ್ಲಿ ಗಿಡಗಂಟಿ ಬೆಳೆದು ಬೇರುಗಳು ಬಿಟ್ಟಿದ್ದು, ಇದರಿಂದಾಗಿ ದೇವಸ್ಥಾನ ಶಿಥಿಲಗೊಳ್ಳುವ ಆತಂಕ ಎದುರಾಗಿದ್ದು, ಈ ಸಂಬಂಧ ಹಲವಾರು ಬಾರಿ ಮುಜರಾಯಿ ಇಲಾಖೆ ಅಧಿಕಾರಿಗಳಿಗೆ ದೇವಸ್ಥಾನದ ಅರ್ಚಕರು, ಭಕ್ತರು ಸಂರಕ್ಷಣಾ ಕಾರ್ಯ ಕೈಗೊಳ್ಳುವಂತೆ ಮನವಿ ಮಾಡಿದ್ದರು. 
    ಈ ನಡುವೆ ಇದೀಗ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಮೂಲಕ ಗಿಡಗಂಟಿಗಳನ್ನು ತೆರವುಗೊಳಿಸಲಾಗಿದೆ. ಪುರಾತತ್ವ ಇಲಾಖೆ ಅಧಿಕಾರಿಗಳು, ಸಿಬ್ಬಿಂದಿಗಳ ಕಾರ್ಯಕ್ಕೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮಾರುತಿ, ಮಾಜಿ ಸದಸ್ಯ ವಿಶ್ವನಾಥ್, ನರಸೇಗೌಡ, ಸುಬ್ರಹ್ಮಣ್ಯ, ವೈಶಾಖ್, ನಿಖಿಲ್, ಹರ್ಷ, ಪ್ರವೀಣ್ ಸೇರಿದಂತೆ ಸ್ಥಳೀಯ ಭಕ್ತರು ಸಹ ಕೈಜೋಡಿಸುವ ಮೂಲಕ ಯಶಸ್ವಿಗೊಳಿಸಿದ್ದಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ