Saturday, June 14, 2025

ಶಾಸಕ ಸಂಗಮೇಶ್ವರ್ ಸಹೋದರರಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರೀಗಳ ಆಶೀರ್ವಾದಪಡೆದು ಪ್ರಾರ್ಥನೆ

ಭದ್ರಾವತಿ ತಾಲೂಕಿನ ಆನವೇರಿ ಗ್ರಾಮದಲ್ಲಿ ಶನಿವಾರ ಜರುಗಿದ ಕಾರ್ಯಕ್ರಮದಲ್ಲಿ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ನೇತೃತ್ವದಲ್ಲಿ ಚಿತ್ರದುರ್ಗ ಶ್ರೀ ತರಳಬಾಳು ಹೊಸದುರ್ಗ ಶಾಖಾ ಮಠದ ಶ್ರೀ ಪಂಡಿತಾರಾಧ್ಯ ಸ್ವಾಮೀಜಿಯವರ ಆಶೀರ್ವಾದಪಡೆದು ಕ್ಷೇತ್ರದ ಅಭಿವೃದ್ಧಿಗೆ ಪ್ರಾರ್ಥಿಸಲಾಯಿತು. 
    ಭದ್ರಾವತಿ : ತಾಲೂಕಿನ ಆನವೇರಿ ಗ್ರಾಮದಲ್ಲಿ ಶನಿವಾರ ಜರುಗಿದ ಕಾರ್ಯಕ್ರಮದಲ್ಲಿ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ನೇತೃತ್ವದಲ್ಲಿ ಚಿತ್ರದುರ್ಗ ಶ್ರೀ ತರಳಬಾಳು ಹೊಸದುರ್ಗ ಶಾಖಾ ಮಠದ ಶ್ರೀ ಪಂಡಿತಾರಾಧ್ಯ ಸ್ವಾಮೀಜಿಯವರ ಆಶೀರ್ವಾದಪಡೆದು ಕ್ಷೇತ್ರದ ಅಭಿವೃದ್ಧಿಗೆ ಪ್ರಾರ್ಥಿಸಲಾಯಿತು. 
    ಕರ್ನಾಟಕ ರಾಜ್ಯ ಗ್ರಾಮೀಣ ಮೂಲಕ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರರಾದ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್, ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಅಧ್ಯಕ್ಷ ಬಿ.ಕೆ ಶಿವಕುಮಾರ್ ಹಾಗು ಮೆಸ್ಲಾಂ ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಸವಂತಪ್ಪ ಸೇರಿದಂತೆ ಇನ್ನಿತರರು ಸ್ವಾಮೀಜಿಯವರಿಂದ ಆಶೀರ್ವಾದಪಡೆದರು. 
    ಶ್ರೀಗಳು ತಾಲೂಕಿನ ಆನವೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಎಚ್ ನಟರಾಜ್‌ಗೌಡರವರ ಶಿವಗಣರಾಧನೆ ಹಾಗು ಧರ್ಮ ಸಮ್ಮೇಳನ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವಹಿಸಿದ್ದರು. ವಿಧಾನ ಪರಿಷತ್ ಮಾಜಿ ಅಧ್ಯಕ್ಷ ಎಸ್. ರುದ್ರೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.   

No comments:

Post a Comment