Monday, June 16, 2025

ಜೂ.೧೭ರಂದು ಲೋಕಾಯುಕ್ತರಿಂದ ಅಹವಾಲು ಸ್ವೀಕಾರ


    ಭದ್ರಾವತಿ : ಉಪ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ವತಿಯಿಂದ ನಗರದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜೂ. ೧೭ರ ಮಂಗಳವಾರ ಬೆಳಗ್ಗೆ ೧೧ ಗಂಟೆಗೆ  ಸಾರ್ವಜನಿಕರಿಂದ ಕುಂದು ಕೊರತೆಗಳ ಅಹವಾಲು ಸ್ವೀಕಾರ ಸಭೆ ಆಯೋಜಿಸಲಾಗಿದೆ. 
    ಇತ್ತೀಚೆಗೆ ಲೋಕಾಯುಕ್ತಕ್ಕೆ ಸಾಕಷ್ಟು ದೂರುಗಳು ಸಲ್ಲಿಕೆಯಾಗುತ್ತಿವೆ. ಈ ಹಿನ್ನಲೆಯಲ್ಲಿ ಪ್ರತಿ ತಿಂಗಳು ಲೋಕಾಯುಕ್ತರಿಂದ ಅಹವಾಲು ಸ್ವೀಕಾರ ಸಭೆ ಆಯೋಜಿಸಿಕೊಂಡು ಬರಲಾಗುತ್ತಿದ್ದು, ಲೋಕಾಯುಕ್ತ ಕಚೇರಿಯನ್ನು ಮತ್ತಷ್ಟು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ. 
    ದೂರುಗಳಿದ್ದಲ್ಲಿ ಸಾರ್ವಜನಿಕರು ಅಹವಾಲು ಸ್ವೀಕಾರ ಸಭೆಗೆ ಖುದ್ದಾಗಿ ಆಗಮಿಸಿ ಸಲ್ಲಿಸುವ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ.  ಇದರ ಸದುಪಯೋಗ ಪಡೆದುಕೊಳ್ಳುವಂತೆ ತಾಲೂಕು ದಂಡಾಧಿಕಾರಿ ತಹಸೀಲ್ದಾರ್‌ರವರು ಕೋರಿದ್ದಾರೆ.

No comments:

Post a Comment