ಭದ್ರಾವತಿ ತಾಲೂಕಿನ ವ್ಯಾಪ್ತಿಯಲ್ಲಿನ ಕೆರೆಗಳನ್ನು ಒತ್ತುವರಿ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯವಹಿಸಿರುವ ತಾಲೂಕು ಆಡಳಿತಕ್ಕೆ ಒತ್ತುವರಿ ತೆರವುಗೊಳಿಸಲು ಆದೇಶಿಸಬೇಕೆಂದು ಸಾಮಾಜಿಕ ಹೋರಾಟಗಾರ ತೀರ್ಥೇಶ ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದ್ದಾರೆ.
ಭದ್ರಾವತಿ : ತಾಲೂಕಿನ ವ್ಯಾಪ್ತಿಯಲ್ಲಿನ ಕೆರೆಗಳನ್ನು ಒತ್ತುವರಿ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯವಹಿಸಿರುವ ತಾಲೂಕು ಆಡಳಿತಕ್ಕೆ ಒತ್ತುವರಿ ತೆರವುಗೊಳಿಸಲು ಆದೇಶಿಸಬೇಕೆಂದು ಸಾಮಾಜಿಕ ಹೋರಾಟಗಾರ ತೀರ್ಥೇಶ ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದ್ದಾರೆ.
ನಗರ ವ್ಯಾಪ್ತಿಯಲ್ಲಿರುವ ಸೀಗೆಬಾಗಿ ಸರ್ವೆ ನಂ.೫೭ */* ಕಸಬಾ-೧ರ ಸರ್ಕಾರಿ ಕೆರೆ(ಬೆಂಡೆಕಟ್ಟೆ ಕೆರೆ) ಸಂಪೂರ್ಣ ಒತ್ತುವರಿಯಾಗಿರುತ್ತದೆ. ಅಲ್ಲದೆ ಕಸಬಾ-೧ರ ಸರ್ವೆ ನಂ.೨೧೬ರಲ್ಲಿನ ಕೆರೆ ಸಹ ಒತ್ತುವರಿಯಾಗಿರುತ್ತದೆ. ಕೆರೆಗಳನ್ನು ಒತ್ತುವರಿ ಮಾಡಿ ನಿವೇಶನ, ಮನೆ ಹಾಗು ಇನ್ನಿತರ ಕಟ್ಟಡಗಳನ್ನು ನಿರ್ಮಾಣ ಮಾಡಿಕೊಂಡಿರುತ್ತಾರೆ. ಆದರೆ ಇಲ್ಲಿಯವರೆಗೂ ಯಾವುದೇ ನೋಟಿಸ್ ನೀಡುವುದು, ಸ್ವಯಂ ದೂರು ದಾಖಲಿಸುವುದು ಮಾಡಿರುವುದಿಲ್ಲ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ತಕ್ಷಣ ತಾಲೂಕು ಆಡಳಿತಕ್ಕೆ ಕೆರೆಗಳ ಒತ್ತುವರಿ ತೆರವುಗೊಳಿಸಲು ಆದೇಶಿಸಬೇಕು. ಒತ್ತುವರಿ ಮಾಡದೆ ನಿರ್ಲಕ್ಷ್ಯವಹಿಸಿರುವ ಅಧಿಕಾರಿಗಳ ವಿರುದ್ಧ ಸರ್ಕಾರದ ಆದೇಶದಂತೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
No comments:
Post a Comment