ಭದ್ರಾವತಿ ಹಳೇನಗರ ವ್ಯಾಪ್ತಿಯ ಗಾಂಧಿನಗರದ ವೇಳಾಂಗಣಿ ಆರೋಗ್ಯ ಮಾತೆ ದೇವಾಲಯದಲ್ಲಿ ಭಾನುವಾರ ತಂದೆಯಂದಿರ ದಿನ ಆಚರಿಸಲಾಯಿತು.
ಭದ್ರಾವತಿ : ಕುಟುಂಬದಲ್ಲಿ ಮಕ್ಕಳಿಗೆ ತಂದೆಯೇ ನಾಯಕ, ಶಕ್ತಿ, ಆಸರೆ, ಆಧಾರ ಸ್ತಂಭ, ಕಷ್ಟಗಳನ್ನು ನಿವಾರಿಸುವ ಪರಿಪಾಲಕ ಅವರನ್ನು ಗೌರವಿಸುವುದು ಮಕ್ಕಳ ಆದ್ಯ ಕರ್ತವ್ಯ ಎಂದು ಹಳೇನಗರ ಗಾಂಧಿನಗರದ ವೇಳಾಂಗಣಿ ಆರೋಗ್ಯ ಮಾತೆ ದೇವಾಲಯದ ಧರ್ಮ ಗುರು ಫಾದರ್ ಸ್ಟೀವನ್ ಡೇಸಾ ಹೇಳಿದರು.
ಅವರು ಭಾನುವಾರ ಧರ್ಮ ಕೇಂದ್ರದ ವತಿಯಿಂದ ಶ್ರೀಸಾಮಾನ್ಯ ಆಯೋಗದ ನಿರ್ದೇಶಕಿ ಸಿಸ್ಟರ್ ಶೋಭನ ನೇತೃತ್ವದಲ್ಲಿ ನಡೆದ ತಂದೆಯಂದಿರ ದಿನಾಚರಣೆ ಅಂಗವಾಗಿ ಮಾತನಾಡಿದರು.
ತಂದೆಯಂದಿರು ಕುಟುಂಬದ ಬೆನ್ನೆಲುಬು, ಮಾರ್ಗದರ್ಶಕರು ಮತ್ತು ಪ್ರೇರಣೆ ನೀಡುವ ವ್ಯಕ್ತಿಯಾಗಿದ್ದಾರೆ. ಕುಟುಂಬಕ್ಕಾಗಿ ಹಗಲಿರುಳು ದುಡಿದು, ಅನೇಕ ತ್ಯಾಗಗಳನ್ನು ಮಾಡುವುದರೊಂದಿಗೆ ಕುಟುಂಬವನ್ನು ಆರ್ಥಿಕವಾಗಿ, ಸದೃಢವನ್ನಾಗಿ ಮಾಡುವಲ್ಲಿ ಶ್ರಮಿಸುತ್ತಾರೆ. ಅವರಿಗಾಗಿ ಕುಟುಂಬದ ಸದಸ್ಯರು ದೇವರಲ್ಲಿ ಪ್ರತಿದಿನ ಪ್ರಾರ್ಥಿಸುವುದರೊಂದಿಗೆ, ಪ್ರೀತಿಸಬೇಕು ಎಂದರು.
ನಂತರ ಧರ್ಮ ಕೇಂದ್ರದಲ್ಲಿರುವ ಎಲ್ಲಾ ತಂದೆಯಂದಿರಿಗೆ ವಿಶೇಷವಾಗಿ ಪ್ರಾರ್ಥಿಸಿ, ತೈಲಾಭಿಷೇಕ ನೆರವೇರಿಸಿ, ಸಿಹಿಯೊಂದಿಗೆ ಉಡುಗೊರೆ ನೀಡಲಾಯಿತು. ಸಿಸ್ಟರ್ ತೆರೇಸಾ, ಆಯೋಗದ ಸದಸ್ಯರು, ಭಕ್ತಾದಿಗಳು ಪಾಲ್ಗೊಂಡಿದ್ದರು.
No comments:
Post a Comment