ಭದ್ರಾವತಿ : ಮೆಸ್ಕಾಂ ಗ್ರಾಮೀಣ ಉಪ ವಿಭಾಗದ ವತಿಯಿಂದ ಜೂ.೪ರಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ.
ಗ್ರಾಮೀಣ ಉಪ ವಿಭಾಗದ ಕಛೇರಿಯಲ್ಲಿ ನಡೆಯಲಿರುವ ಸಭೆ ಅಧ್ಯಕ್ಷತೆಯನ್ನು ಅಧೀಕ್ಷಕ ಇಂಜಿನಿಯರ್ರವರು ವಹಿಸಲಿದ್ದು, ತಾಲೂಕಿನ ಕಾರೇಹಳ್ಳಿ, ಬಾರಂದೂರು, ಅಂತರಗಂಗೆ, ದೊಡ್ಡೇರಿ, ಬಿ.ಆರ್ಪಿ, ದೊಣಬಘಟ್ಟ, ತಡಸ, ಬಿಳಿಕಿ, ಅರಳಿಕೊಪ್ಪ, ಕಂಬದಾಳ್, ಹೊಸೂರು, ಅರಳಿಹಳ್ಳಿ, ಕೂಡ್ಲಿಗೆರೆ, ಅತ್ತಿಗುಂದ, ವೀರಾಪುರ, ಕಲ್ಲಹಳ್ಳಿ ಸುತಮುತ್ತಲಿನ ಪ್ರದೇಶಗಳ ವ್ಯಾಪ್ತಿಯ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಕುಂದುಕೊರತೆ, ಅಹವಾಲುಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ. ಇದರ ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ.
No comments:
Post a Comment