ಭದ್ರಾವತಿ ನಗರಸಭೆ ವ್ಯಾಪ್ತಿಯ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನದ ದೇವಿಯ ಆಲಯ ಪ್ರವೇಶ, ಸ್ಥಿರಬಿಂಬ ಪ್ರತಿಷ್ಠಾಪನೆ, ದೇವಿಯ ಗೋಪುರ ಪ್ರತಿಷ್ಠೆ, ಕಳಸಾರೋಹಣ ಮತ್ತು ದೀಪ ಸ್ತಂಭ ಪ್ರತಿಷ್ಠಾಪನೆ ಧಾರ್ಮಿಕ ಕಾರ್ಯ ೪೮ ದಿನ ಪೂರೈಸಿದ ಹಿನ್ನಲೆಯಲ್ಲಿ ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ೨ ದಿನಗಳ ಕಾಲ ವಿಶೇಷ ಧಾರ್ಮಿಕ ಆಚರಣೆಗಳನ್ನು ನೆರವೇರಿಸಲಾಯಿತು.
ಭದ್ರಾವತಿ : ನಗರಸಭೆ ವ್ಯಾಪ್ತಿಯ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನದ ದೇವಿಯ ಆಲಯ ಪ್ರವೇಶ, ಸ್ಥಿರಬಿಂಬ ಪ್ರತಿಷ್ಠಾಪನೆ, ದೇವಿಯ ಗೋಪುರ ಪ್ರತಿಷ್ಠೆ, ಕಳಸಾರೋಹಣ ಮತ್ತು ದೀಪ ಸ್ತಂಭ ಪ್ರತಿಷ್ಠಾಪನೆ ಧಾರ್ಮಿಕ ಕಾರ್ಯ ೪೮ ದಿನ ಪೂರೈಸಿದ ಹಿನ್ನಲೆಯಲ್ಲಿ ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ೨ ದಿನಗಳ ಕಾಲ ವಿಶೇಷ ಧಾರ್ಮಿಕ ಆಚರಣೆಗಳನ್ನು ನೆರವೇರಿಸಲಾಯಿತು.
ಸೋಮವಾರ ಬೆಳಿಗ್ಗೆ ಕಲಾ ಹೋಮ ಹಾಗು ಮಧ್ಯಾಹ್ನ ಅನ್ನ ಸಂತರ್ಪಣೆ, ಮಂಗಳವಾರ ಬೆಳಿಗ್ಗೆ ತಂಬಿಟ್ಟಿನ ಆರತಿಯೊಂದಿಗೆ ದೇವಸ್ಥಾನದ ಆವರಣದಲ್ಲಿ ಉತ್ಸವಮೂರ್ತಿ ಮೆರವಣಿಗೆ ನಡೆಸಲಾಯಿತು. ಚೌಡೇಶ್ವರಿ ಅಮ್ಮನವರಿಗೆ ಹಾಗೂ ಮುನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಮತ್ತು ವಿಶೇಷ ಪೂಜೆ, ಮಧ್ಯಾಹ್ನ ಸಹಸ್ರರಾರು ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು.
ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ಆಡಳಿತ ಮಂಡಳಿಯವರು, ದೇವಸ್ಥಾನದ ಅರ್ಚಕರು, ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು, ಗಣ್ಯರು, ಸುರಗಿತೋಪು, ಕಾಗದನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.
Mob: 9738801478
: 9482007466
No comments:
Post a Comment