ಭದ್ರಾವತಿ ನಗರದ ಹಿರಿಯ ಪತ್ರಕರ್ತ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ ತಮ್ಮ ೫೦ನೇ ವರ್ಷದ ವಿವಾಹ ವಾರ್ಷಿಕೋತ್ಸವ ಭಾನುವಾರ ಪತ್ನಿ ಶಾಂತ ಅವರೊಂದಿಗೆ ತಾಲೂಕಿನ ತಮ್ಮಡಿಹಳ್ಳಿ ಶ್ರೀಗಂಧ ಪ್ರಕೃತಿಧಾಮದಲ್ಲಿ ಆಚರಿಸಿಕೊಂಡರು.
ಭದ್ರಾವತಿ : ನಗರದ ಹಿರಿಯ ಪತ್ರಕರ್ತ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ ತಮ್ಮ ೫೦ನೇ ವರ್ಷದ ವಿವಾಹ ವಾರ್ಷಿಕೋತ್ಸವ ಭಾನುವಾರ ಪತ್ನಿ ಶಾಂತ ಅವರೊಂದಿಗೆ ತಾಲೂಕಿನ ತಮ್ಮಡಿಹಳ್ಳಿ ಶ್ರೀಗಂಧ ಪ್ರಕೃತಿಧಾಮದಲ್ಲಿ ಆಚರಿಸಿಕೊಂಡರು.
ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು, ಸಹೋದರರು ಸೇರಿದಂತೆ ಬಂಧು-ಬಳಗದವರೊಂದಿಗೆ ವಿವಾಹ ವಾರ್ಷಿಕೋತ್ಸವ ವಿಶೇಷವಾಗಿ ಆಚರಿಸಿಕೊಳ್ಳಲಾಯಿತು. ಕಣ್ಣಪ್ಪ ದಂಪತಿಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಕುಟುಂಬ ವರ್ಗದವರು, ವಿಧಾನಪರಿಷತ್ ಮಾಜಿ ಸದಸ್ಯ ಎಸ್. ರುದ್ರೇಗೌಡ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮೊದಲಿಯಾರ್ ಹಾಗು ತಮಿಳು ಸಂಘದ ಜಿಲ್ಲಾ ಹಾಗು ತಾಲೂಕು ಸಂಘ, ಲಾರಿ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆ ಅಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಗಣ್ಯರು ಪಾಲ್ಗೊಂಡು ಸಂಭ್ರಮ ಹಂಚಿಸಿಕೊಂಡರು.
No comments:
Post a Comment