Thursday, June 19, 2025

ಜಯಮ್ಮ ನಿಧನ

ಜಯಮ್ಮ 
    ಭದ್ರಾವತಿ : ತಾಲೂಕು ಜಂಗಮ ಸಮಾಜದ ಅಧ್ಯಕ್ಷ, ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ನೌಕರ ಎಸ್. ಅಡವೀಶಯ್ಯನವರ ಧರ್ಮಪತ್ನಿ ಜಯಮ್ಮ(೬೮) ಗುರುವಾರ ಸಂಜೆ ನಿಧನ ಹೊಂದಿದರು. 
    ಪತಿ ಎಸ್. ಅಡವೀಶಯ್ಯ, ೪ ಜನ ಪುತ್ರಿಯರು, ಅಳಿಯಂದಿರು ಹಾಗು ಮೊಮ್ಮಕ್ಕಳು ಇದ್ದಾರೆ. ಇವರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ೧ ಗಂಟೆಗೆ ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ. 
    ಇವರ ನಿಧನಕ್ಕೆ ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್ ಕುಮಾರ್, ಜೇಡಿಕಟ್ಟೆ ಮರುಳಸಿದ್ದೇಶ್ವರ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಮೆಸ್ಕಾಂ ಸಲಹಾ ಸಮಿತಿ ಅಧ್ಯಕ್ಷ ಬಸವಂತಪ್ಪ, ಜಂಗಮ ಸಮಾಜದ ಪ್ರಮುಖರು, ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ನೌಕರರು, ರೋಟರಿ ಸಂಸ್ಥೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ. 

No comments:

Post a Comment