ಗೌರಮ್ಮ
ಭದ್ರಾವತಿ : ತಾಲೂಕಿನ ಕಡದಕಟ್ಟೆ ನಿವಾಸಿ, ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ ನಂಜುಂಡಪ್ಪನವರ ಪತ್ನಿ ಗೌರಮ್ಮ(೮೨) ಬುಧವಾರ ಬೆಳಗಿನ ಜಾವ ನಿಧನ ಹೊಂದಿದರು.
ಇವರಿಗೆ ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ಸಂಜೆ ಅಂತ್ಯಕ್ರಿಯೆ ನೆರವೇರಿತು. ಇವರ ನಿಧನಕ್ಕೆ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್ಕುಮಾರ್, ಹಿರಿಯ ಸದಸ್ಯ ಬಿ.ಕೆ ಮೋಹನ್, ಮರುಳ ಸಿದ್ದೇಶ್ವರ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಶ್ರೀ ಬಸವೇಶ್ವರ ಧರ್ಮಸಂಸ್ಥೆ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment