ಸೋಮವಾರ, ಜೂನ್ 30, 2025

ಪ್ರಧಾನ ಮಂತ್ರಿ ಅವಾಸ್ ಯೋಜನೆ ೨.೦ ಯೋಜನೆಯಡಿ ಅರ್ಜಿ ಆಹ್ವಾನ

ನಗರ ವ್ಯಾಪ್ತಿಯ ಕಂಪ್ಯೂಟರ್ ಸಿಬ್ಬಂದಿಗಳಿಗೆ ಮಾಹಿತಿ 

ಪ್ರಧಾನ ಮಂತ್ರಿ ಅವಾಸ್ ಯೋಜನೆ ೨.೦ ಯೋಜನೆಯಡಿ ಭದ್ರಾವತಿ ನಗರಸಭೆ ವ್ಯಾಪ್ತಿಯ ವಸತಿ ರಹಿತ ಹಾಗು ನಿವೇಶನ ರಹಿತ ಕುಟುಂಬಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈ ಸಂಬಂಧ ಸೋಮವಾರ ನಗರಸಭೆ ಸಭಾಂಗಣದಲ್ಲಿ ಕಂಪ್ಯೂಟರ್ ಸೆಂಟರ್ ಸಿಬ್ಬಂದಿಗಳ ಜೊತೆ ಸಭೆ ನಡೆಸಲಾಯಿತು.
    ಭದ್ರಾವತಿ: ಪ್ರಧಾನ ಮಂತ್ರಿ ಅವಾಸ್ ಯೋಜನೆ ೨.೦ ಯೋಜನೆಯಡಿ ನಗರಸಭೆ ವ್ಯಾಪ್ತಿಯ ವಸತಿ ರಹಿತ ಹಾಗು ನಿವೇಶನ ರಹಿತ ಕುಟುಂಬಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈ ಸಂಬಂಧ ಸೋಮವಾರ ನಗರಸಭೆ ಸಭಾಂಗಣದಲ್ಲಿ ಕಂಪ್ಯೂಟರ್ ಸೆಂಟರ್ ಸಿಬ್ಬಂದಿಗಳ ಜೊತೆ ಸಭೆ ನಡೆಸಲಾಯಿತು. 
    ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಅವಾಸ್ ೨.೦ ಯೋಜನೆಯನ್ನು ರಾಜ್ಯ ಸರ್ಕಾರದ ನಗರ ವಸತಿ ಯೋಜನೆಗಳೊಂದಿಗೆ ಸಂಯೋಜನೆಗೊಳಿಸಿ ಅನುಷ್ಠಾನಗೊಳಿಸುತ್ತಿದ್ದು, ನಗರಸಭೆ ವ್ಯಾಪ್ತಿಯ ವಸತಿ ರಹಿತ(ಕಚ್ಚಾ ಮನೆ ಹೊಂದಿರುವ) ಮತ್ತು ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ ಯೂನಿಫೈಡ್ ವೆಬ್ ಪೋರ್ಟಲ್ (Unified Web Portal )  ನಲ್ಲಿ ಅರ್ಜಿ ಆಹ್ವಾನಿಸಿದೆ. 
    ನಗರ ವ್ಯಾಪ್ತಿಯ ಯಾವುದೇ ಕಂಪ್ಯೂಟರ್ ಸೆಂಟರ್‌ಗಳಲ್ಲಿ ದಿನಾಂಕ ಜು.೧೭, ೨೦೨೫ರೊಳಗಾಗಿ ಕೇಂದ್ರ ಸರ್ಕಾರದ https//pmay.urban.gov.in  ಈ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನಲೆಯಲ್ಲಿ ಅರ್ಜಿ ಸಲ್ಲಿಸಲು ಕಂಪ್ಯೂಟರ್ ಸೆಂಟರ್‌ಗಳಿಗೆ ಬರುವ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡುವ ಮೂಲಕ ಅರ್ಜಿ ಸಲ್ಲಿಸಲು ನೆರವಾಗುವಂತೆ ಕಂಪ್ಯೂಟರ್ ಸೆಂಟರ್ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಯಿತು. 
ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್ ಮತ್ತು ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ನಗರ ವಸತಿ ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್, ಸಮುದಾಯ ಸಂಘಟನಾ ಅಧಿಕಾರಿ ಸುವಾಸಿನಿ ಉಪಸ್ಥಿತರಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ