Monday, June 30, 2025

೧೧ ವರ್ಷ ಅಧಿಕಾರಾವಧಿಯಲ್ಲಿ ಸಂಸದರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸರ್ವತೋಮುಖ ಅಭಿವೃದ್ಧಿ ಕಾರ್ಯಗಳು

ಭದ್ರಾವತಿಯಲ್ಲಿ ಬಿಜೆಪಿ ಪಕ್ಷದ ನಗರ ಮಂಡಲದ ಹುತ್ತ  ಹಾಗೂ ಜನ್ನಾಪುರ ಮಹಾಶಕ್ತಿ ಕೇಂದ್ರಗಳ ವತಿಯಿಂದ ಬಿ.ಎಚ್ ರಸ್ತೆ ಶ್ರೀ ಭದ್ರೇಶ್ವರ ಸ್ವಾಮಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಕಸಿತ ಭಾರತ ಸಾಧನ ಸಮಾವೇಶ ಜರುಗಿತು. 
    ಭದ್ರಾವತಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ೧೧ ವರ್ಷ ಅಧಿಕಾರಾವಧಿ ಯಶಸ್ವಿಯಾಗಿ ಪೂರೈಸಿದ್ದು,  ಜಿಲ್ಲೆಯಲ್ಲಿ ಸಂಸದ ಬಿ.ವೈ ರಾಘವೇಂದ್ರರವರು ಕೈಗೊಂಡಿರುವ ಹಲವಾರು ಅಭಿವೃದ್ಧಿ ಕಾರ್ಯಗಳು ಕೇಂದ್ರ ಸರ್ಕಾರದ ಸಾಧನೆಗೆ ಸಾಕ್ಷಿ ಎಂಬಂತೆ ಕಂಡು ಬರುತ್ತಿವೆ ಎಂದು ಪಕ್ಷದ ಜಿಲ್ಲಾ ಮುಖಂಡರು ಹೇಳಿದರು.  
    ಪಕ್ಷದ ನಗರ ಮಂಡಲದ ಹುತ್ತ  ಹಾಗೂ ಜನ್ನಾಪುರ ಮಹಾಶಕ್ತಿ ಕೇಂದ್ರಗಳ ವತಿಯಿಂದ ಬಿ.ಎಚ್ ರಸ್ತೆ ಶ್ರೀ ಭದ್ರೇಶ್ವರ ಸ್ವಾಮಿ ದೇವಸ್ಥಾನದ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಕಸಿತ ಭಾರತ ಸಾಧನ ಸಮಾವೇಶದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಜಿಲ್ಲಾ ಖಜಾಂಚಿ ರಾಮಣ್ಣ ಮತ್ತು ಶಿವಮೊಗ್ಗ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ದೀನ್ ದಯಾಳುರವರು, ಜಿಲ್ಲೆಯಲ್ಲಿ ಸಂಸದ ಬಿ.ವೈ ರಾಘವೇಂದ್ರರವರ ನೇತೃತ್ವದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಬಹುಮುಖ್ಯವಾಗಿ ವಿಮಾನ ನಿಲ್ದಾಣ, ಹೆದ್ದಾರಿ, ರೈಲ್ವೆ ಅಭಿವೃದ್ಧಿ ಕಾರ್ಯಗಳು, ಸಿಗಂದೂರು ಸೇತುವೆ ನಿರ್ಮಾಣ ಸೇರಿದಂತೆ ಮೂಲ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಲಾಗಿದೆ ಎಂದರು. 
    ಕೇಂದ್ರ ಸರ್ಕಾರದ ಹಲವಾರು ಯೋಜನೆಗಳು ರೈತರು, ಕಾರ್ಮಿಕರು, ಬಡವರು, ಮಕ್ಕಳು-ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಸರ್ವರ ಅಭಿವೃದ್ಧಿಗೆ ಪೂರಕವಾಗಿವೆ ಎಂದರು. 
      ಮಹಾಶಕ್ತಿ ಕೇಂದ್ರಗಳ  ಅಧ್ಯಕ್ಷರಾದ ಸತೀಶ್ ಕುಮಾರ್ ಹಾಗೂ ರಘುರಾವ್ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಆಪರೇಷನ್ ಸಿಂಧೂರದ ಯಶಸ್ವಿಗೆ ಕಾರಣಕರ್ತರಾದ ಭಾರತೀಯ ವೀರಯೋಧರಿಗೆ ಗೌರವ ನಮನಗಳನ್ನು ಸಮರ್ಪಿಸಿ ದೇಶ ಸೇವೆ ಮಾಡಿದ ಮಾಜಿ ಸೈನಿಕರಿಗೆ ಗೌರವಿಸಿ ಸನ್ಮಾನಿಸಲಾಯಿತು. ಅಲ್ಲದೆ ವಿಕಸಿತ ಭಾರತದ ಅಮೃತಕಾಲದ ಸಂಕಲ್ಪ  ಮಾಡಲಾಯಿತು. 
    ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಮಾಜಿ ಸೈನಿಕ ಸಂಘದ ತಾಲೂಕು ಅಧ್ಯಕ್ಷ ಸುಬೇದಾರ್ ಗುಲ್ಗುಲೆ, ಸುಬೇದಾರ್ ಶ್ರೀನಿವಾಸ್, ಕಮಾಂಡೋ ಗಿರೀಶ್, ಹವಲ್ದಾರ್‌ಗಳಧ ಸುರೇಶ್, ಧರ್ಮಕುಮಾರ್ ಮತ್ತು ಜಿ. ವಾಸುದೇವನ್,  ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್ ಹಾಗೂ ಮೊಸರಳ್ಳಿ ಅಣ್ಣಪ್ಪ,  ಪ್ರಮುಖರಾದ  ಜಿ. ರಾಮುಲಿಂಗಯ್ಯ, ಜಿಲ್ಲಾ ವಿಶೇಷ ಆಹ್ವಾನಿತ ಎಂ. ಮಂಜುನಾಥ್, ಪ್ರಮುಖರಾದ ಪ್ರೇಮ್ ಕುಮಾರ್, ಸುಲೋಚನಾ ಪ್ರಕಾಶ್, ಅನ್ನಪೂರ್ಣ, ರಾಜಶೇಖರ್ ಉಪ್ಪಾರ್, ಲತಾ ಪ್ರಭಾಕರ್, ರವಿಕುಮಾರ್, ಚಂದ್ರಪ್ಪ, ನಂಜಪ್ಪ, ಶೋಭಾ ಪಾಟೀಲ್, ಆಶಾ ಪುಟ್ಟಸ್ವಾಮಿ, ಆಟೋ ಮೂರ್ತಿ, ಮಂಜುಳ, ಉಮಾವತಿ, ಮಂಜುನಾಥ್, ದೀಪಕ್, ಧರ್ಮಣ್ಣ, ಮಂಜೇಗೌಡ, ಶ್ರೀನಿವಾಸ್ ಕಾರಂತ್, ಮಹಾಶಕ್ತಿ ಕೇಂದ್ರ ಹಾಗೂ ಬೂತ್ ಪ್ರಮುಖ ಕಾರ್ಯಕರ್ತರು ಪಾಲ್ಗೊಂಡಿದ್ದರು. 

No comments:

Post a Comment