ಭದ್ರಾವತಿ : ಭದ್ರಾ ಬಲದಂಡೆ ನಾಲೆ ಸೀಳಿ ಸರ್ಕಾರ ಕೈಗೊಳ್ಳುತ್ತಿರುವ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗು ಹಸಿರುಸೇನೆ ಮತ್ತು ಭದ್ರಾ ಅಚ್ಚುಕಟ್ಟು ರೈತರ ಹಿತರಕ್ಷಣಾ ಸಮಿತಿ ತಾಲೂಕು ಶಾಖೆ ವತಿಯಿಂದ ಜು.೨ರಂದು ರಸ್ತೆ ತಡೆ ಚಳುವಳಿ ಹಾಗು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ತಾಲೂಕಿನ ಅರಹತೊಳಲು ಕೈಮರ, ಎನ್.ಡಿ ಸುಂದರೇಶ್ ವೃತ್ತದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ರಸ್ತೆ ತಡೆ ಚಳುವಳಿ ಹಾಗು ಮಧ್ಯಾಹ್ನ ೧೨.೩೦ಕ್ಕೆ ತಾಲೂಕು ಕಛೇರಿ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ರೈತ ಮುಖಂಡ ಕೆ.ಟಿ ಗಂಗಾಧರ್ ನೇತೃತ್ವವಹಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment