ಗುರುವಾರ, ಜುಲೈ 31, 2025
ಸೆಲ್ವರಾಜ್ ನಿಧನ
ಶ್ರೀ ಭಗವದ್ಗೀತಾ ಅಭಿಯಾನ ಪೂರ್ವಭಾವಿ ಸಭೆ : ಮಾಹಿತಿ ಪತ್ರ ಬಿಡುಗಡೆ
ಎಂಪಿಎಂ ಕಾರ್ಖಾನೆ ಪುನರ್ ಆರಂಭ ಸೇರಿದಂತೆ ವಿವಿಧ ಸಮಸ್ಯೆಗಳ ಅಹವಾಲು ಸಲ್ಲಿಕೆ
ಶಿವಮೊಗ್ಗ ಜಿಲ್ಲಾ ಶಾಸಕರ ಸಭೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್
ಅಧಿಕೃತ ಪತ್ರ ಬರಹಗಾರರಿಗೆ ಮಾತ್ರ ನೋಂದಾಣಿಗೆ ಅವಕಾಶ ಕಲ್ಪಿಸಿಕೊಡಿ
ಬುಧವಾರ, ಜುಲೈ 30, 2025
ಮಾದಿಗ ಸಮಾಜ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಕೆ.ಬಿ ಶಿವುಕುಮಾರ್ ನೇಮಕ
ಡಾ. ಬಿ.ಆರ್ ಅಂಬೇಡ್ಕರ್ ಭವನ ಕಾಮಗಾರಿ ತಕ್ಷಣ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಿ
ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಗ್ರಹ
ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ವೈದ್ಯರು-ಸಿಬ್ಬಂದಿಗಳು ಸೌಜನ್ಯತೆಯಿಂದ ನಡೆದುಕೊಳ್ಳಿ
ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್
ಮಂಗಳವಾರ, ಜುಲೈ 29, 2025
ಕವಿಗೋಷ್ಠಿಯಿಂದ ಕಾವ್ಯ ರಚನೆ ಮಾಡಲು ಆಸಕ್ತಿ ಬೆಳೆಯುತ್ತದೆ: ಎಂ.ಎಸ್ ಸುಧಾಮಣಿ
ಕನ್ನಡ ಸಾಹಿತ್ಯ ಸಾಂಸ್ಕೃತ ವೇದಿಕೆಯಿಂದ ಭದ್ರಾವತಿ ಆಂಜನೇಯ ಅಗ್ರಹಾರ, ಉಂಬ್ಳೆಬೈಲು ರಸ್ತೆ, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಮುಂಗಾರು ಕಾವ್ಯ ಧಾರೆ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು
ಭದ್ರಾವತಿ: ಕಾಲೇಜು ವಿದ್ಯಾರ್ಥಿಗಳಿಗೆ ಕವಿಗೋಷ್ಠಿ ಏರ್ಪಡಿಸುವುದರಿಂದ ಅವರಲ್ಲಿ ಕಾವ್ಯ ರಚನೆ ಮಾಡಲು ಆಸಕ್ತಿ ಬೆಳೆಯುತ್ತದೆ. ಆ ಮೂಲಕ ಯುವ ಸಮೂಹದಲ್ಲಿ ಸಾಹಿತ್ಯಾಭಿರುಚಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ ಕೊಂಡು ಬರಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಹೇಳಿದರು.
ಅವರು ಕನ್ನಡ ಸಾಹಿತ್ಯ ಸಾಂಸ್ಕೃತ ವೇದಿಕೆಯಿಂದ ಆಂಜನೇಯ ಅಗ್ರಹಾರ, ಉಂಬ್ಳೆಬೈಲು ರಸ್ತೆ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮುಂಗಾರು ಕಾವ್ಯ ಧಾರೆ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇದಿಕೆಯಿಂದ ಸಾಹಿತ್ಯ ಕಮ್ಮಟ, ಮಕ್ಕಳ ಸಾಹಿತ್ಯ ಸಮ್ಮೇಳನ, ಮಾತೃಭಾಷೆ ದಿನಾಚರಣೆ ಮತ್ತು ಶ್ರಾವಣ ಸಂಭ್ರಮ ಸೇರಿದಂತೆ ವಿಭಿನ್ನ ರೀತಿಯ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಸಾಹಿತ್ಯ ಸಾಂಸ್ಕೃತ ವೇದಿಕೆ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವ ಪೀಳಿಗೆಗೆ ಉತ್ತೇಜನದ ಜೊತೆಗೆ ಕಥೆ, ಕವನ, ಕಾದಂಬರಿ ಹಾಗೂ ಸೃಜನಶೀಲ ಬರವಣಿಗೆ ಸೇರಿದಂತೆ ಸಾಹಿತ್ಯಪರ ಚಟುವಟಿಕೆಗಳಲ್ಲಿ ಅವರು ತೊಡಗಿಸಿಕೊಂಡು ಕನ್ನಡ ಭಾಷೆ ಮೇಲಿನ ಹಿಡಿತ ಸಾಧಿಸಿ ಭಾಷಾ ಅಭಿಮಾನ ಬೆಳೆಸುವ ಕಾರ್ಯ ಕೃಗೊಳ್ಳಲಾಗುತ್ತಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್, ಹಿರಿಯ ಲೇಖಕ, ಸಾಹಿತಿ ಜಿ.ವಿ ಸಂಗಮೇಶ್ವರ, ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಮಿತಿ ಅಧ್ಯಕ್ಷೆ ಡಾ. ವಿಜಯದೇವಿ, ಕ.ಸಾ.ಪ ತಾಲೂಕು ಅಧ್ಯಕ್ಷ ಟಿ. ತಿಮ್ಮಪ್ಪ, ಉಪಾಧ್ಯಕ್ಷ ಬಿ.ಕೆ ಜಗನ್ನಾಥ್, ನಿಕಟಪೂರ್ವ ಅಧ್ಯಕ್ಷ ಕೊಡ್ಲುಯಜ್ಞಯ್ಯ ಕ.ಸಾ. ಸಾಂ ವೇದಿಕೆ ಕಾರ್ಯದರ್ಶಿ ಉಮಾಪತಿ, ಖಜಾಂಚಿ ಗಂಗರಾಜ್, ಸಂಘಟನಾ ಕಾರ್ಯದರ್ಶಿ ಕಮಲಕುಮಾರಿ, ಕಾಂತಪ್ಪ ಬಣಗಾರ್, ಪ್ರಕಾಶ್, ಕಮಲಾಕರ್, ತಿಪ್ಪಮ್ಮ, ಮಲ್ಲಿಕಾಂಬ, ಇಂದಿರಾ, ಮಾಯಮ್ಮ, ಚನ್ನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ರಮೇಶ್ ಶಂಕರಘಟ್ಟರಿಗೆ ಅಭಿನಂದನೆ
ಸೋಮವಾರ, ಜುಲೈ 28, 2025
ಪ್ರೇಕ್ಷಕರ ಮನಸೂರೆಗೊಂಡ 'ಸಂಗ್ಯಾ ಬಾಳ್ಯಾ' ನಾಟಕ
ಉಚಿತ ವಿದ್ಯುತ್ ಗೃಹ ಜ್ಯೋತಿ ಯೋಜನೆ ಯಶಸ್ವಿಗೊಳಿಸಿ: ಬಿ.ಎಸ್ ಗಣೇಶ್
ಭಾನುವಾರ, ಜುಲೈ 27, 2025
ಪಡಿತರ ವಿತರಕರಿಗೆ ತಕ್ಷಣ ಕೆವೈಸಿ ಕಮಿಷನ್ ಹಣ ಪಾವತಿಸಿ : ಸಿದ್ದಲಿಂಗಯ್ಯ
ಜೀವನದಿ ಭದ್ರೆ ಭರ್ತಿಗೆ ಕೇವಲ ೩-೪ ಅಡಿ ಮಾತ್ರ ಬಾಕಿ : ಹೊಸಸೇತುವೆ ಮುಳುಗಡೆ
ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಸಹಕಾರ್ಯದರ್ಶಿಯಾಗಿ ಬಿಳಿಕಿ ಶ್ರೀ
ಶನಿವಾರ, ಜುಲೈ 26, 2025
ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಡುಗಡೆ : ಮುಳುಗಡೆ ಹಂತಕ್ಕೆ ತಲುಪಿದ ಹೊಸ ಸೇತುವೆ
`ಮನೆ-ಮನೆಗೆ ಪೊಲೀಸ್' ಸದುಪಯೋಗಪಡಿಸಿಕೊಳ್ಳಿ : ಸ್ನೇಹಪರ, ಸೌಹಾರ್ದ ಸಮಾಜ ನಿರ್ಮಿಸಿ
ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮನವಿ
ಹುಟ್ಟುಹಬ್ಬದ ಶುಭಾಶಯ ಕೋರಿ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ
ಶುಕ್ರವಾರ, ಜುಲೈ 25, 2025
ಸರ್ಕಾರಿ ಡಿ' ದರ್ಜೆ ನೌಕರರ ಸಂಘದ ಅಧ್ಯಕ್ಷ ನಂಜುಂಡಸ್ವಾಮಿ ನಿಧನ
ಜು.೨೭ರಂದು ಕುರುಬರ ಸಂಘಕ್ಕೆ ಚುನಾವಣೆ
`ಕರ್ನಾಟಕ ಸ್ಟಾರ್ ಸಿಂಗರ್ ಸೀಸನ್-೨' ಲಾಂಛನ, ಕರಪತ್ರ ಬಿಡುಗಡೆ
ಹೃದಯಾಘಾತಕ್ಕೆ ೩೪ ವರ್ಷದ ವ್ಯಕ್ತಿ ಬಲಿ
ಸಮಾಜದ ಸುಧಾರಣೆಯಲ್ಲಿ ತೊಡಗಿರುವ ಪತ್ರಕರ್ತರಿಗೆ ಇನ್ನೂ ಹೆಚ್ಚಿನ ಶಕ್ತಿ ತುಂಬಿ: ಬಿ.ಕೆ ಸಂಗಮೇಶ್ವರ
ಭದ್ರಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಉಷಾಮಹಿ ಪತ್ರಿಕೆ ಸಂಪಾದಕರಾದ ಶಾಂತಿ ಕಣ್ಣಪ್ಪ ದಂಪತಿ ೫೦ ವರ್ಷಗಳ ದಾಂಪತ್ಯ ಜೀವನ ಯಶಸ್ವಿಯಾಗಿ ಪೂರೈಸಿರುವ ಹಿನ್ನಲೆಯಲ್ಲಿ ಸಂಘದ ವತಿಯಿಂದ ಅವರಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು.
ಬುಧವಾರ, ಜುಲೈ 23, 2025
ಮುಂದಿನ ಚುನಾವಣೆಯಲ್ಲಿ ಪಕ್ಷದ ವರ್ಚಸ್ಸು, ಕಾರ್ಯಕರ್ತರು, ಅಭಿಮಾನಿ ಬಳಗದ ಶಕ್ತಿಯಿಂದ ಶಾರದ ಅಪ್ಪಾಜಿ ಗೆಲ್ಲಿಸಿಕೊಳ್ಳುತ್ತೇವೆ
ಜೆಡಿಎಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
ವಿಐಎಸ್ಎಲ್ ಕಾರ್ಖಾನೆ ಮರುನಿರ್ಮಾಣ ಕುಮಾರಣ್ಣ ಶಪಥ : ನಿಖಿಲ್ ಕುಮಾರಸ್ವಾಮಿ
ದಲಿತ, ಪ್ರಗತಿಪರ ಸಂಘಟನೆಗಳ ಒಗ್ಗೂಡಿಸಲು ನೂತನ ಸಮಿತಿ ಅಸ್ತಿತ್ವಕ್ಕೆ : ವಿ. ವಿನೋದ್
ಒಗ್ಗಟ್ಟಾಗಿ ಮುನ್ನಡೆಯುವ ಮೂಲಕ ಸಮುದಾಯಕ್ಕೆ ಗೌರವ ತಂದುಕೊಡುವ ಕೆಲಸ ಮಾಡಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯ ಸರ್ಕಾರ ಈ ಹಿಂದೆ ಕೈಗೊಂಡಿದ್ದ ಜಾತಿ ಗಣತಿ ಸಂಬಂಧ ಸಾಕಷ್ಟು ಚರ್ಚೆಗಳು ನಡೆದಿದ್ದು, ವೀರಶೈವ ಲಿಂಗಾಯತ ಸಮುದಾಯದ ಜನಪ್ರತಿನಿಧಿಗಳು ಒಟ್ಟಾಗಿ ಗಣತಿಯಲ್ಲಿನ ಲೋಪದೋಷಗಳನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಪುನಃ ಜಾತಿಗಣತಿಗೆ ಆದೇಶಿಸಿದ್ದಾರೆ. ಈ ಹಿನ್ನಲೆಯಲ್ಲಿ ಸಮುದಾಯದವರು ಜಾತಿಗಣತಿಗೆ ಬರುವವರಿಗೆ ಕಡ್ಡಾಯವಾಗಿ ಅಗತ್ಯ ಮಾಹಿತಿಗಳನ್ನು ನೀಡುವ ಮೂಲಕ ಭವಿಷ್ಯದಲ್ಲಿ ಸಮುದಾಯದ ಏಳಿಗೆಗೆ ಪ್ರತಿಯೊಬ್ಬರು ಕೈಜೋಡಿಸಬೇಕು.- ಲಕ್ಷ್ಮೀ ಹೆಬ್ಬಾಳ್ಕರ್, ಸಚಿವೆ.