Tuesday, July 1, 2025

ದ್ವಿಚಕ್ರ ವಾಹನ ಕಳ್ಳತನ : ಓರ್ವ ಯುವಕ ಬಂಧನ

ದ್ವಿಚಕ್ರ ವಾಹನಗಳ ಕಳ್ಳತನದಲ್ಲಿ ತೊಡಗಿದ್ದ ಯುವಕನೋರ್ವನನ್ನು ಬಂಧಿಸಿ ೪ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ನ್ಯೂಟೌನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. 
    ಭದ್ರಾವತಿ: ದ್ವಿಚಕ್ರ ವಾಹನಗಳ ಕಳ್ಳತನದಲ್ಲಿ ತೊಡಗಿದ್ದ ಯುವಕನೋರ್ವನನ್ನು ಬಂಧಿಸಿ ೪ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ನ್ಯೂಟೌನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. 
    ನಗರಸಭೆ ವ್ಯಾಪ್ತಿಯ ಹೊಸಮನೆ ಹನುಮಂತನಗರದ ನಿವಾಸಿ ಹರ್ಷ(೧೯) ಬಂಧಿತ ಯುವಕನಾಗಿದ್ದು, ದಾವಣಗೆರೆ ಜಿಲ್ಲೆ, ಹೊನ್ನಾಳಿ ತಾಲೂಕಿನ ನಿವಾಸಿ ಜಿ. ಮಹೇಶ್ ಎಂಬುವರು ಮೇ.೩೧ರಂದು ಬೆಳಿಗ್ಗೆ ನಗರದ ಬಿ.ಎಚ್ ರಸ್ತೆಯ ಸುರೇಶ್ ಆಟೋ ವರ್ಕ್ಸ ಮುಂಬಾಗದಲ್ಲಿ ನಿಲ್ಲಿಸಿದ್ದ ಬಜಾಜ್ ಡಿಸ್ಕವರಿ ೧೨೫ ದ್ವಿಚಕ್ರ ವಾಹನ ಕಳ್ಳತನ ಮಾಡಲಾಗಿದೆ ಎಂದು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 
     ಈ ಹಿನ್ನಲೆಯಲ್ಲಿ ಪ್ರಕರಣ ಭೇದಿಸಲು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್ , ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗಳಾದ ಅನಿಲ್ ಕುಮಾರ್ ಭೂಮರೆಡ್ಡಿ ಮತ್ತು ಎ.ಜಿ ಕಾರಿಯಪ್ಪರವರ ಮಾರ್ಗದರ್ಶನದಲ್ಲಿ ಉಪವಿಭಾಗದ ಪೊಲೀಸ್ ಉಪ ಅಧೀಕ್ಷಕ ಕೆ.ಆರ್ ನಾಗರಾಜು, ನಗರ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್ ಮೇಲ್ವಿಚಾರಣೆಯಲ್ಲಿ ನ್ಯೂಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕ ಟಿ. ರಮೇಶ್‌ರವರ ನೇತೃತ್ವದಲ್ಲಿ ಸಹಾಯಕ ಉಪ ನಿರೀಕ್ಷಕ ಟಿ.ಪಿ ಮಂಜಪ್ಪ, ಸಿಬ್ಬಂದಿಗಳಾದ ನವೀನ್ ಮತ್ತು ಪ್ರಸನ್ನ ಅವರನ್ನೊಳಗೊಂಡ ತಂಡ ರಚಿಸಲಾಗಿತ್ತು.  
    ಪ್ರಕರಣ ಭೇದಿಸಿದ ತಂಡ ಹರ್ಷನನ್ನು ಬಂಧಿಸಿ ಕಳ್ಳತನ ಮಾಡಲಾಗಿದ್ದ ೪ ಮತ್ತು ಕೃತ್ಯಕ್ಕೆ ಬಳಸಿದ ೧ ಒಟ್ಟು ೫ ದ್ವಿಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಅಂದಾಜು ಮೌಲ್ಯ ಒಟ್ಟು ೨.೪೦ ಲಕ್ಷ ರು. ಗಳಾಗಿವೆ. ಹರ್ಷನ ವಿರುದ್ಧ  ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ೩, ಚಿಕ್ಕಮಗಳೂರು ಜಿಲ್ಲೆ ಬೀರೂರು ಠಾಣೆಯಲ್ಲಿ ೧  ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳ ದಾಖಲಾಗಿದ್ದವು. ತನಿಖಾ ತಂಡವನ್ನು ಜಿಲ್ಲಾ ರಕ್ಷಣಾಧಿಕಾರಿಗಳು ಅಭಿನಂದಿಸಿದ್ದಾರೆ.  

No comments:

Post a Comment