Friday, July 4, 2025

ಮೆಸ್ಕಾಂ ಕಛೇರಿಗೆ ವ್ಯವಸ್ಥಾಪಕ ನಿರ್ದೇಶಕ ರಾಜಿ ಜಯಕುಮಾರ್ ಭೇಟಿ

ಸಲಹಾ ಸಮಿತಿಯಿಂದ ಹಳೇನಗರ ಭಾಗದಲ್ಲಿ ವಿದ್ಯುತ್ ಕೌಂಟರ್ ತೆರೆಯಲು ಮನವಿ 

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ(ಮೆಸ್ಕಾಂ) ಭದ್ರಾವತಿ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ವ್ಯವಸ್ಥಾಪಕ ನಿರ್ದೇಶಕ ರಾಜಿ ಜಯಕುಮಾರ್‌ರವರನ್ನು ಸಲಹಾ ಸಮಿತಿ ಅಧ್ಯಕ್ಷ ಬಸವಂತಪ್ಪನವರ ನೇತೃತ್ವದಲ್ಲಿ ಭೇಟಿ ಮಾಡಿದ ಸದಸ್ಯರು ಅವರನ್ನು ಸನ್ಮಾನಿಸಿ ಗೌರವಿಸಿದರು. 
    ಭದ್ರಾವತಿ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ(ಮೆಸ್ಕಾಂ) ನಗರದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ವ್ಯವಸ್ಥಾಪಕ ನಿರ್ದೇಶಕ ರಾಜಿ ಜಯಕುಮಾರ್‌ರವರಿಗೆ ಸಲಹಾ ಸಮಿತಿ ವತಿಯಿಂದ ಹಳೇನಗರ ವಿಭಾಗಕ್ಕೆ ಪ್ರತ್ಯೇಕವಾಗಿ ವಿದ್ಯುತ್ ಬಿಲ್‌ಗಳನ್ನು ಪಾವತಿಸಲು ಕೌಂಟರ್ ತೆರೆಯುವಂತೆ ಮನವಿ ಸಲ್ಲಿಸಲಾಯಿತು. 
    ರಾಜಿ ಜಯಕುಮಾರ್‌ರವರನ್ನು ಸಲಹಾ ಸಮಿತಿ ಅಧ್ಯಕ್ಷ ಬಸವಂತಪ್ಪನವರ ನೇತೃತ್ವದಲ್ಲಿ ಭೇಟಿ ಮಾಡಿದ ಸದಸ್ಯರು ಅವರನ್ನು ಸನ್ಮಾನಿಸಿ ಗೌರವಿಸುವ ಮೂಲಕ ತಾಲೂಕಿನಲ್ಲಿ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಿದರು. 
    ಸಾರ್ವಜನಿಕರ ಕುಂದು ಕೊರತೆಗಳ ಕುರಿತಂತೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ವ್ಯವಸ್ಥಾಪಕ ನಿರ್ದೇಶಕರು ಪೂರಕವಾಗಿ ಸ್ಪಂದಿಸಿದ್ದಾರೆ. ಸದಸ್ಯರಾದ ಸುರೇಶ್ ವರ್ಮ, ವಿಜಯಲಕ್ಷ್ಮಿ, ಸೆಲ್ವರಾಜ್ ಹಾಗು ಮೆಸ್ಕಾಂ ಸ್ಥಳೀಯ ಅಧಿಕಾರಿಗಳು ಉಪಸ್ಥಿತರಿದ್ದರು.  

No comments:

Post a Comment