ಎಸ್. ಮಂಜುನಾಥ್
ಭದ್ರಾವತಿ : ನಗರದ ಜನ್ನಾಪುರ ನಿವಾಸಿ, ಕೆಪಿಸಿಸಿ ರಾಜ್ಯ ಸಂಚಾಲಕ ಎಸ್. ಮಂಜುನಾಥ್ರವರು ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ ೨೦-೨೫ ವರ್ಷಗಳಿಂದ ಕಾಣೆಯಾಗಿರುವ ಒಟ್ಟು ಮಹಿಳೆಯರು ಹಾಗು ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯರ ಅಂಕಿ-ಅಂಶ ಮಾಹಿತಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿರುತ್ತಾರೆ. ಅಲ್ಲದೆ ಜು.೧೨ರಂದು ಮನುಷ್ಯರೊಬ್ಬರ ತಲೆ ಬುರುಡೆ ಕೊರಕಿದ ಬಗ್ಗೆ ಹಾಗು ನಾಪತ್ತೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾಗಿರುವುದು ಗಮನಕ್ಕೆ ಬಂದಿರುತ್ತದೆ.
ಈ ಹಿನ್ನಲೆಯಲ್ಲಿ ಕಳೆದ ೨೦-೨೫ ವರ್ಷಗಳಿಂದ ಈ ವ್ಯಾಪ್ತಿಯಲ್ಲಿ ಕಾಣೆಯಾಗಿರುವ ಒಟ್ಟು ಮಹಿಳೆಯರ ಹಾಗು ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಅಂಕಿ-ಅಂಶಗಳು ಹಾಗು ಕೈಗೊಂಡ ಕ್ರಮಗಳು, ಪತ್ತೆ ಮಾಡಲಾದ ಮತ್ತು ಪತ್ತೆ ಮಾಡಲಾಗದ ಹಾಗು ಅತ್ಯಾಚಾರ ಪ್ರಕರಣಗಳ ಮಾಹಿತಿ ನೀಡುವಂತೆ ಎಸ್. ಮಂಜುನಾಥ್ ಕೋರಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ