ಮಂಗಳವಾರ, ಜುಲೈ 22, 2025

ಅನನ್ಯ ಎಜ್ಯುಕೇಷನ್ ಟ್ರಸ್ಟ್‌ನಿಂದ ಶಾಲಾ ಮಕ್ಕಳಿಗೆ ಉಚಿತ ಕಣ್ಣಿನ ತಪಾಸಣೆ

ಭದ್ರಾವತಿ ನಗರದ ಅಪ್ಪರ್ ಹುತ್ತಾ, ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಶಿವಮೊಗ್ಗ ಆಶೀರ್ವಾದ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಮಂಗಳವಾರ ಅನನ್ಯ ಪ್ರೌಢಶಾಲಾ ಆವರಣದಲ್ಲಿ ೩ ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು. 
    ಭದ್ರಾವತಿ: ನಗರದ ಅಪ್ಪರ್ ಹುತ್ತಾ, ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಶಿವಮೊಗ್ಗ ಆಶೀರ್ವಾದ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಮಂಗಳವಾರ ಅನನ್ಯ ಪ್ರೌಢಶಾಲಾ ಆವರಣದಲ್ಲಿ ೩ ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು. 
    ನೇತ್ರ ತಜ್ಞ ಡಾ. ಅರುಣ್ ನೇತೃತ್ವದಲ್ಲಿ  ನಡೆದ ಶಿಬಿರದಲ್ಲಿ ೩ ರಿಂದ ೧೦ನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೂ ತಪಾಸಣೆ ನಡೆಸುವ ಜೊತೆಗೆ ಕಣ್ಣಿನ ದೃಷ್ಠಿ ಸಮಸ್ಯೆ ಹೊಂದಿರುವ ಮಕ್ಕಳ ಪೋಷಕರನ್ನು ಕರೆಸಿ ಅವರಿಗೆ ಅವರ ಮಕ್ಕಳ ಕಣ್ಣಿನ ದೃಷ್ಠಿ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಡಲಾಯಿತು. 
    ಡಾ.ಅರುಣ್ ಮಾತನಾಡಿ, ಒಳ್ಳೆಯ ಆಹಾರ ಸ್ವೀಕರಿಸುವುದರಿಂದ ಕಣ್ಣಿನ ರಕ್ಷಣೆ ಮಾಡಿಕೊಳ್ಳಬಹುದಾಗಿದೆ. ಮಿತಿಮೀರಿದ ಮೊಬೈಲ್ ವೀಕ್ಷಣೆಯು ನಮ್ಮ ಕಣ್ಣಿಗೆ ಸಮಸ್ಯೆಯುಂಟು ಮಾಡುತ್ತದೆ. ಈ ಹಿನ್ನಲೆಯಲ್ಲಿ ಮೊಬೈಲ್ ವೀಕ್ಷಣೆ ನಿರ್ಧಿಷ್ಟ ಸಮಯಕ್ಕೆ ಮಾತ್ರ ಮೀಸಲಿರಿಸಿಕೊಳ್ಳಬೇಕೆಂದು ಮಕ್ಕಳಿಗೆ ಸಲಹೆ ನೀಡಿದರು. 
    ಅನನ್ಯ ಎಜ್ಯುಕೇಷನ್ ಟ್ರಸ್ಟ್ ಕಾರ್ಯದರ್ಶಿ ಬಿ.ಎಸ್ ಅನಿಲ್ ಕುಮಾರ್ ಶಿಬಿರದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ರಾಧಿಕಾ ಕಾರ್ಯಕ್ರಮದಲ್ಲಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.  
    ಆಡಳಿತಾಧಿಕಾರಿ ವೇಣುಗೋಪಾಲ್, ಮುಖ್ಯ ಶಿಕ್ಷಕ ಕೆ. ಕಲ್ಲೇಶ್ ಕುಮಾರ್, ಉಪ ಮುಖ್ಯೋಪಾಧ್ಯಾಯಿನಿ ಆರ್. ಸುನಿತಾ, ಅನನ್ಯ ಹ್ಯಾಪಿ ಹಾರ್ಟ್‌ನ ಮುಖ್ಯ ಶಿಕ್ಷಕಿ ತನುಜ ಅನಿಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ