Saturday, July 12, 2025

ಚುಂಚಾದ್ರಿ ಮಹಿಳಾ ವೇದಿಕೆಯಿಂದ ಗುರುಪೂರ್ಣಿಮೆ

ಭದ್ರಾವತಿ ನಗರದ ಚುಂಚಾದ್ರಿ ಮಹಿಳಾ ವೇದಿಕೆವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಗುರುಪೂರ್ಣಿಮೆ ವಿಶಿಷ್ಟವಾಗಿ ಆಚರಿಸಲಾಯಿತು. 
    ಭದ್ರಾವತಿ: ನಗರದ ಚುಂಚಾದ್ರಿ ಮಹಿಳಾ ವೇದಿಕೆವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಗುರುಪೂರ್ಣಿಮೆ ವಿಶಿಷ್ಟವಾಗಿ ಆಚರಿಸಲಾಯಿತು. 
    ಗುರುಪೂರ್ಣಿಮೆ ಅಂಗವಾಗಿ ಶ್ರೀ ಕ್ಷೇತ್ರ ಆದಿಚುಂಚನಗಿರಿ ಸಂಸ್ಥಾನ ಮಠದ ಡಾ. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮತ್ತು ಡಾ. ಶ್ರೀ ನಿರ್ಮಲನಂದನಾಥ ಸ್ವಾಮೀಜಿಯವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ವೇದಿಕೆ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್‌ರವರು ಗುರು ಪೂರ್ಣಿಮೆ ಆಚರಣೆ ಮಹತ್ವ, ಗುರು-ಶಿಷ್ಯರ ಸಂಬಂಧಗಳು ಹಾಗು ವೇದವ್ಯಾಸರ ಜೀವನ ಚರಿತ್ರೆ ಕುರಿತು ಮಾತನಾಡಿದರು. 
    ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಮಾತನಾಡಿ, ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಗುರುಗಳ ಮಹತ್ವ ಅರಿತುಕೊಂಡು ಗುರುಗಳನ್ನು ಸ್ಮರಿಸಿಕೊಳ್ಳುವ ಮೂಲಕ ಅವರನ್ನು ಗೌರವಿಸಬೇಕೆಂದರು. 
    ಕಾರ್ಯಕ್ರಮದಲ್ಲಿ ಉದ್ಯಮಿ ಅರುಂದತಿ, ಗಾಯತ್ರಿ ಯಲ್ಲಪ್ಪ ಗೌಡ ಉಪಸ್ಥಿತರಿದ್ದರು. ವೇದಿಕೆ ಪದಾಧಿಕಾರಿಗಳು ಹಾಗು ನಿರ್ದೇಶಕರು ಪಾಲ್ಗೊಂಡಿದ್ದರು.  ಕಾರ್ಯದರ್ಶಿ ಪ್ರತಿಭಾ ವಂದಿಸಿದರು. 

No comments:

Post a Comment