ಸೋಮವಾರ, ಜುಲೈ 21, 2025

ಸಮಾಜಕ್ಕೆ ಡಾ. ಎಚ್.ಎಸ್.ವಿ ಕೊಡುಗೆ ಅನನ್ಯ : ಡಾ. ಕೃಷ್ಣ ಎಸ್. ಭಟ್

ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹಿಂಭಾಗದ ಶ್ರೀ ಗಾಯಿತ್ರಿ ಧರ್ಮ ಶಾಲಾ ಸಭಾಂಗಣದಲ್ಲಿ ದಿವಂಗತ ಡಾ. ಎಚ್.ಎಸ್ ವೆಂಕಟೇಶ್ ಮೂರ್ತಿರವರ ಸ್ಮರಣಾರ್ಥ ಏರ್ಪಡಿಸಲಾಗಿದ್ದ  ಭಾವ-ಗಾನ-ಗೌರವ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಭೂಮಿಕಾ ವೇದಿಕೆ ಆಧ್ಯಕ್ಷ, ವೈದ್ಯ ಡಾ. ಕೃಷ್ಣ ಎಸ್. ಭಟ್ ಮಾತನಾಡಿದರು.
    ಭದ್ರಾವತಿ: ಪ್ರಮುಖ ವ್ಯಕ್ತಿಗಳ ಸಂಸ್ಮರಣೆ ಮಾಡುವುದು ಎಂದರೆ ಆ ಪ್ರಸಿದ್ಧ ವ್ಯಕ್ತಿಗಳ ವ್ಯಕ್ತಿತ್ವ, ಜೀವನ ಶೈಲಿ, ಅವರು ಸಮಾಜಕ್ಕೆ ಹಾಗು ತಾವು ಇರುವ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವ ಕಾರ್ಯವಾಗಿದೆ ಎಂದು ಭೂಮಿಕಾ ವೇದಿಕೆ ಆಧ್ಯಕ್ಷ, ವೈದ್ಯ ಡಾ. ಕೃಷ್ಣ ಎಸ್. ಭಟ್ ಹೇಳಿದರು.
    ಅವರು ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹಿಂಭಾಗದ ಶ್ರೀ ಗಾಯಿತ್ರಿ ಧರ್ಮ ಶಾಲಾ ಸಭಾಂಗಣದಲ್ಲಿ ದಿವಂಗತ ಡಾ. ಎಚ್.ಎಸ್ ವೆಂಕಟೇಶ್ ಮೂರ್ತಿರವರ ಸ್ಮರಣಾರ್ಥ ಏರ್ಪಡಿಸಲಾಗಿದ್ದ  ಭಾವ-ಗಾನ-ಗೌರವ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.
    ವೆಂಕಟೇಶ್‌ಮೂರ್ತಿಯವರ ಕವಿತೆ, ಕವನಗಳಲ್ಲಿ ಆಯಾಯ ಕಾಲಘಟ್ಟದಲ್ಲಿ ಆಯಾಯ ವಯೋಮಾನದವರು ಅನುಭವಿಸಿದ ಸಂಗತಿಗಳ ಹಾಡನ್ನು ರಚಿಸಿರುವುದು ಅವರ ವ್ಯಕ್ತಿತ್ವದ ವಿಶೇಷವಾಗಿದೆ. ಅವರು ಇಂದು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅವರು ರಚಿಸಿದ ಕವನ, ಕವಿತೆಗಳ ಮೂಲಕ ಸದಾ ಕನ್ನಡಿಗರ ಮನದಲ್ಲಿ ಉಳಿದುಕೊಂಡಿದ್ದಾರೆ ಎಂದರು.
    ಭೂಮಿಕಾ ವೇದಿಕೆ ಸದಸ್ಯರು ವೆಂಕಟೇಶ್ ಮೂರ್ತಿಯವರು ರಚಿಸಿರುವ ಆಯ್ದ ಗೀತೆಗಳನ್ನು ಸುಶ್ರಾವ್ಯವಾಗಿ ಪ್ರಸ್ತುತ ಪಡಿಸಿದರು.
    ಎಸ್.ಜಯಾ ಹೆಗಡೆ ವೇದಿಕೆ ನೂತನ ಸದಸ್ಯರಾಗಿ ಸೇರ್ಪಡೆಗೊಂಡರು. ವೇದಿಕೆ ಪ್ರಧಾನ ಕಾರ್ಯದರ್ಶಿ ಅಪರಂಜಿ ಶಿವರಾಜ್, ಕೋಶಾಧ್ಯಕ್ಷ ಮುನಿರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಶಾಮಲ ಮತ್ತು ವೀಣಾ ಪ್ರಾರ್ಥಿಸಿ, ಅಪರಂಜಿ ಶಿವರಾಜ್ ಸ್ವಾಗತಿಸಿದರು. ಆನಂದ್ ಕಾರ್ಯಕ್ರಮ ನಿರೂಪಿಸಿದರು. ಉಷಾ ಶಶಿಧರ ಎಚ್.ಎಸ್ ವೆಂಕಟೇಶ್ ಮೂರ್ತಿಯವರ ಜೀವನ ಪರಿಚಯ ಮಾಡಿದರು. ನಿವೃತ್ತ ಪ್ರಾಂಶುಪಾಲ ಬಿ.ಕಾಂತಪ್ಪ ನುಡಿ ನಮನ ಸಲ್ಲಿಸಿ, ರಮೇಶ್ ವಂದಿಸಿದರು. 

1 ಕಾಮೆಂಟ್‌: