ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗಕ್ಕೆ ನೂತನವಾಗಿ ನೇಮಕವಾಗಿರುವ ಎಂ.ರಮೇಶ್ ಶಂಕರಘಟ್ಟರನ್ನು ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮಾಂತರ ಘಟಕಗಳ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ ಜು.29: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗಕ್ಕೆ ನೂತನವಾಗಿ ನೇಮಕವಾಗಿರುವ ಎಂ.ರಮೇಶ್ ಶಂಕರಘಟ್ಟರನ್ನು ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮಾಂತರ ಘಟಕಗಳ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಪಕ್ಷದ ಜಂಟಿ ಕಾರ್ಯಕರ್ತರ ಸಭೆಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ರಮೇಶ್, ಕ್ಷೇತ್ರದ ಸರ್ವಾಂಗೀಣಾಭಿವೃದ್ದಿಗೆ ಶ್ರಮಿಸುತ್ತಿರುವ ಶಾಸಕ ಬಿ.ಕೆ ಸಂಗಮೇಶ್ವರ್ ರವರ ಕೈ ಬಲಪಡಿಸುವುದರ ಮೂಲಕ ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಗಟ್ಟಿಗೊಳಿಸಲು ಶ್ರಮಿಸಬೇಕೆಂದು ಕರೆ ನೀಡಿದರಲ್ಲದೆ, ಪ್ರತಿ ತಿಂಗಳು 27ರಂದು ಕಾರ್ಯಕರ್ತರ ಸಭೆ ಏರ್ಪಡಿಸಿ ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುತಿರುವುದು ಶ್ಲಾಘನೀಯ ಕಾರ್ಯ ಈ ಹಿನ್ನೆಲೆಯಲ್ಲಿ ಬ್ಲಾಕ್ ಅಧ್ಯಕ್ಷರುಗಳನ್ನು ಅಭಿನಂದಿಸುವುದಾಗಿ ತಿಳಿಸಿದರು.
ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಮಾತನಾಡಿ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರನ್ನಾಗಿ ರಮೇಶ್ ರನ್ನು ನೇಮಿಸಿರುವುದು ನಮ್ಮ ತಾಲೂಕಿಗೆ ಹೆಮ್ಮೆಯ ವಿಚಾರ ಎಂದರು.
ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್ ಮಾತನಾಡಿ, ಮುಂದಿನ ದಿನಗಳಲ್ಲಿ ಕಾರ್ಯಕರ್ತರಿಗೆ ತರಬೇತಿ ಕಾರ್ಯಾಗಾರ ಆಯೋಜಿಸಿ ಮುಂದಿನ ಚುನಾವಣೆಗಳಿಗೆ ಅವರನ್ನು ಸಜ್ಜುಗೊಳಿಸಲಾಗುತ್ತಿದೆ. ಇದಕ್ಕೆ ಹಿಂದುಳಿದ ವರ್ಗಗಳ ವಿಭಾಗದ ಸಹಕಾರ ಅಗತ್ಯವೆಂದರು.
ಕಾರ್ಯಕ್ರಮದಲ್ಲಿ ನಗರ ಹಿಂದುಳಿದ ವರ್ಗಗಳ ಅಧ್ಯಕ್ಷ ಬಿ. ಗಂಗಾಧರ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಮೀರ್ ಜಾನ್, ಎಸ್.ಸಿ.ಘಟಕದ ಅಧ್ಯಕ್ಷ ಈಶ್ವರಪ್ಪ, ಎಸ್ ಟಿ ಘಟಕದ ಅಧ್ಯಕ್ಷೆ ಲಕ್ಷ್ಮೀದೇವಿ, ನಗರಸಭಾ ಸದಸ್ಯ ಚನ್ನಪ್ಪ, ಕಾರ್ಯದರ್ಶಿ ಸಿ. ಜಯಪ್ಪ, ಜುಂಜ್ಯಾನಾಯ್ಕ, ಶಶಿಕುಮಾರ್, ಪ್ರಕಾಶ್ ತಳ್ಳಿಕಟ್ಟೆ ಮೊದಲಾದವರಿದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ